ನವದೆಹಲಿ: ಎರಡು ದಿನಗಳ ಹಿಂದೆ ಅಪ್ಪಳಿಸಿದ ಅಂಫಾನ್ ಚಂಡಮಾರುತದಿಂದ ತೀವ್ರ ಹಾನಿಗೊಳಗಾಗಿರುವ ಪಶ್ಚಿಮ ಬಂಗಾಳದತ್ತ ಪ್ರಧಾನಿ ನರೇಂದ್ರ ಮೋದಿ ನೆರವಿನ ಹಸ್ತ ಮುಂಚಾಚಿದ್ದಾರೆ. ಅಂದಾಜು 1 ಸಾವಿರ ಕೋರಿ ರೂ.ಗಳ ನೆರವು ನೀಡುವುದಾಗಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದಿಂದ ಭಾರಿ ಹಾನಿಯಾಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ಜತೆ ಹಾನಿಗೀಡಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್ನಲ್ಲಿ ತೆರಳಿದ ಮೂವರು ಹಾನಿಗೀಡಾದ ಪ್ರದೇಶಗಳನ್ನು ಅವಲೋಕಿಸಿದರು.
ಇದನ್ನೂ ಓದಿ: ನಾವ್ ಮನೀಗ್ ಹೋಗಾಂಗಿಲ್ಲಾ… ಪಾಕಿಸ್ತಾನ ವಲಸಿಗರ ಹಾಡುಪಾಡು…
ಅಂಫಾನ್ ಚಂಡಮಾರುತ ಕೋಲ್ಕತಾ ಸೇರಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಕ್ಕೆ ಬುಧವಾರ ಅಪ್ಪಳಿಸಿತ್ತು. ಇದರಿಂದಾಗಿ 80 ಮಂದಿ ಮೃತಪಟ್ಟಿದ್ದಲ್ಲದೆ, ಸಾಕಷ್ಟು ಆಸ್ತಿ ಹಾನಿಗೀಡಾಗಿದೆ. ಸಹಸ್ರಾರು ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಬುಡಮೇಲಾಗಿ ಬಿದ್ದಿವೆ. ಇವೆಲ್ಲವನ್ನೂ ಪ್ರಧಾನಿ ಮೋದಿ ವೀಕ್ಷಿಸಿದರು.
ಇದಕ್ಕೂ ಮುನ್ನ ಸರಣಿ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ಪಶ್ಚಿಮ ಬಂಗಾಳದ ಜತೆಗಿದೆ ಎಂದು ಹೇಳಿದ್ದರು. ಚಂಡಮಾರುತದಿಂದ ತೊಂದರೆಗೀಡಾದವರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡಲಾಗುವುದು. ಇದರಿಂದ ಹಿಂದೆಸರಿಯುವ ಮಾತಿಲ್ಲ ಎಂದು ತಿಳಿಸಿದ್ದರು.
ರಿಲಯನ್ಸ್ ಜಿಯೋ ಪ್ಲಾಟ್ಫಾರಂನಲ್ಲಿ ಕೆಕೆಆರ್ನಿಂದ 11,367 ಕೋಟಿ ರೂ. ಹೂಡಿಕೆ