More

    ವಿಷ ಅನಿಲ ಸೋರಿಕೆ ದುರಂತ; ಗೃಹಸಚಿವಾಲಯ, ಎನ್​ಡಿಎಂಎ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ

    ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮಲ್ಟಿನ್ಯಾಶನಲ್​ ರಾಸಾಯನಿಕ ಕಂಪನಿಯೊಂದರಲ್ಲಿ ವಿಷ ಅನಿಲ ಸೋರಿಕೆಯಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ. 200ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.

    ಇದನ್ನೂ ಓದಿ: ವಿಷಕಾರಿ ಅನಿಲ ಸೋರಿಕೆಯಿಂದ 6 ಜನ ಕಾರ್ಮಿಕರ ಸಾವು

    ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶ ಗೃಹಸಚಿವಾಲಯದ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್​ಡಿಎಂಎ) ಸಿಬ್ಬಂದಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಘಟನೆಯ ಸಂಪೂರ್ಣ ವರದಿ ಕೇಳಿದ್ದಾರೆ. ಹಾಗೇ ಸ್ಥಳದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯ ಬಗ್ಗೆಯೂ ವಿಚಾರಿಸಿದ್ದಾರೆ.

    ನಂತರ ಟ್ವೀಟ್ ಮಾಡಿರುವ ಮೋದಿಯವರು, ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಿಂದ ಕಷ್ಟಪಡುತ್ತಿರುವ ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆ ಗುಜರಾತ್​ನ ದೇವಸ್ಥಾನದಲ್ಲಿ ಕಂತೆ ಕಂತೆ ನಕಲಿ ನೋಟುಗಳು ವಶ? ಫ್ಯಾಕ್ಟ್​ಚೆಕ್​ನಲ್ಲಿ ಸತ್ಯಾಂಶ!

    ವಿಶಾಖಪಟ್ಟಣಂನ ಆರ್​ಆರ್ ವೆಂಕಟಪುರಂ ಎಂಬ ಹಳ್ಳಿಯಲ್ಲಿ ಇರುವ ಎಲ್​.ಜಿ ಪಾಲಿಮರ್ಸ್​ ಇಂಡಿಯಾ ಪ್ರವೈಟ್​ ಲಿಮಿಟೆಡ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ನಡೆದ ಈ ದುರಂತದಲ್ಲಿ ಪುಟ್ಟ ಮಗು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಸುಮಾರು 2000 ಮೆಟ್ರಿಕ್​ ಟನ್​ಗಳಷ್ಟು ವಿಷ ಅನಿಲ ಸೋರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಎನ್​ಡಿಎಂಎ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

    ಆಂಧ್ರಪ್ರದೇಶ ಮುಖ್ಯಮಂತ್ರಿ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts