ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ದಿನ ಹತ್ತಿರ ಬರುತ್ತಿದ್ದಂತೆ ಅದರ ಬಗ್ಗೆ ಚರ್ಚೆಯೂ ಹೆಚ್ಚಾಗಿದೆ. ಪ್ರತಿಪಕ್ಷಗಳ ಹಲವು ನಾಯಕರು ತಮ್ಮದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ.
ಈ ಮಧ್ಯೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರೂ ರಾಮಮಂದಿರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಒಂದಿಲ್ಲೊಂದು ಹೇಳಿಕೆ ನೀಡುವ ಸುಬ್ರಹ್ಮಣಿಯನ್ ಸ್ವಾಮಿ ಇದೀಗ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.
ಟಿವಿ ಚಾನೆಲ್ವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ಈಗ ನಿರ್ಮಾಣವಾಗುತ್ತಿರುವ ರಾಮನ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಏನೂ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಭೂಮಿ ಪೂಜೆಗಾಗಿ 151 ಪವಿತ್ರ ನದಿಗಳ ನೀರು ಸಂಗ್ರಹಿಸಿ, ಅಯೋಧ್ಯೆ ತಲುಪಿದ ಸಹೋದರರು
ರಾಮ ಮಂದಿರ ನಿರ್ಮಾಣದ ಬಗ್ಗೆ ನಾವೆಲ್ಲ ಅನೇಕ ಚರ್ಚೆ, ವಾದಗಳನ್ನು ಮಾಡಿದ್ದೇವೆ. ಆದರೆ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಉಲ್ಲೇಖವಾಗಿರುವ, ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರವಾಗಿರುವ ಯಾವುದೇ ಅಂಶವನ್ನೂ, ಕೆಲಸವನ್ನೂ ಕೇಂದ್ರ ಸರ್ಕಾರ ಮಾಡಲಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
ಮಾಜಿ ಪ್ರಧಾನಿಗಳು ಮತ್ತು ಕಾಂಗ್ರೆಸ್ ನಾಯಕರಾದ ರಾಜೀವ್ ಗಾಂಧಿ, ಪಿ.ವಿ.ನರಸಿಂಹ ರಾವ್ ಹಾಗೂ ವಿಶ್ವ ಹಿಂದು ಪರಿಷತ್ನ ಅಶೋಕ್ ಸಿಂಘಾಲ್ ಅವರು ರಾಮಮಂದಿರ ನಿರ್ಮಾಣದ ಕಾರ್ಯಸೂಚಿಯನ್ನು ಮುಂದಿಟ್ಟ ಪ್ರಮುಖರು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. (ಏಜೆನ್ಸೀಸ್)
ಅಯೋಧ್ಯೆ ರಾಮಮಂದಿರ ನಿರ್ಮಾಣ ಸ್ಥಳ ಭೇಟಿಯನ್ನು ರದ್ದುಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್…