ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮುಂದುವರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಮಂಗಳವಾರ ಸಂಜೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್ಲಾಕ್ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದ ಸ್ಥಿತಿ ಉತ್ತಮವಾಗಿದೆ. ಸರಿಯಾದ ಸಮಯಕ್ಕೆ ಲಾಕ್ಡೌನ್ ಮಾಡಿದ್ದೇವೆ. ಈ ಮೂಲಕ ಲಕ್ಷಾಂತರ ಜನರ ಪ್ರಾಣ ಉಳಿಸಿದ್ದೇವೆ. ನಾವೆಲ್ಲರೂ ಲಾಕ್ಡೌನ್ ನಿಯಮ ಪಾಲಿಸಿದ್ದೇವೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಸಿದ್ದೇವೆ. ಆದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್ ಝೋನ್ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.
ಇದನ್ನೂ ಓದಿ: ನವೆಂಬರ್ವರೆಗೂ ಬಡವರಿಗೆ ಉಚಿತ ಪಡಿತರ ವಿತರಣೆ: ಪ್ರಧಾನಿ ಮೋದಿ ಘೋಷಣೆ
ಕರೊನಾ ನಿಯಮಗಳಿಗಿಂತ ಯಾರೂ ಅತೀತರಲ್ಲ. ಸಾಮಾನ್ಯನಿಂದ ಪ್ರಧಾನಿಯವರೆಗೂ ಒಂದೇ ನಿಯಮ ಅನ್ವಯವಾಗುತ್ತದೆ. ನಿಯಮ ಉಲ್ಲಂಘಿಸುವವರಿಗೆ ತಿಳುವಳಿಕೆ ಹೇಳಬೇಕು. ಲಾಕ್ಡೌನ್ ನಿಯಮಗಳಿಂದ ಯಾರೂ ಹೊರತಾಗಿಲ್ಲ ಎಂದರು.
ಲಾಕ್ಡೌನ್ ಬೆನ್ನಲ್ಲೇ ಗರೀಬ್ ಕಲ್ಯಾಣ ಯೋಜನೆ ಜಾರಿಗೊಳಿಸಲಾಯಿತು. 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ರೈತರ ಖಾತೆಗಳಿಗೆ 18 ಸಾವಿರ ಕೋಟಿ ರೂ. ಜಮೆಯಾಗಿದೆ. 9 ಸಾವಿರಕ್ಕೂ ಹೆಚ್ಚು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ಜಮೆ ಮಾಡಲಾಗಿದೆ. ಬಡವರ ಖಾತೆಗಳಿಗೆ 31 ಸಾವಿರ ಕೋಟಿ ರೂ. ಜಮೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ವಿಶ್ವದ ಅತಿಎತ್ತರದ ರಣಾಂಗಣ ಪ್ರವೇಶಿಸಿದ ಭೀಷ್ಮ, ಭಾರತದ ಆಕ್ರಮಣಕಾರಿ ಮನೋಭಾವ ಪ್ರದರ್ಶನ
ಇದೇ ವೇಳೆ ಲಾಕ್ಡೌನ್ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಮತ್ತೆ ಲಾಕ್ಡೌನ್ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.
ಟಿಕ್ಟಾಕ್ ಮಾಡಿ ಲಕ್ಷ ಗೆಲ್ಲಿ! ಡಿಕೆಶಿ ಪರ ನಲ್ಪಾಡ್ ಘೋಷಣೆ- ನೆಟ್ಟಿಗರ ಆಕ್ರೋಶ