More

    ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ; ರಾಜ್ಯಪಾಲರು, ಮುಖ್ಯಮಂತ್ರಿಯವರಿಂದ ಸ್ವಾಗತ

    ಬೆಂಗಳೂರು: ‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ಇದೀಗವಷ್ಟೇ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.

    ಇಂದು ರಾಜಭವನದಲ್ಲಿ ತಂಗಲಿರುವ ಪ್ರಧಾನಿ ಮೋದಿ ನಾಳೆ ಬೆಳಗ್ಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯ-2023 ಪ್ರದರ್ಶನ ಉದ್ಘಾಟಿಸಲಿರುವರು. ಬೆಳಗ್ಗೆ ವಿಶೇಷ ಹೆಲಿಕಾಪ್ಟರ್​​ನಲ್ಲಿ ಅವರು ಏರೋ ಇಂಡಿಯಾ ಪ್ರದರ್ಶನದ ಸ್ಥಳ ತಲುಪಲಿದ್ದಾರೆ.

    ಅಲ್ಲಿ ರಕ್ಷಣಾ ಕ್ಷೇತ್ರದ ವಸ್ತುಪ್ರದರ್ಶನ, ಮಳಿಗೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅವರೊಂದಿಗೆ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಮಧ್ಯಾಹ್ನವೇ ದೆಹಲಿಗೆ ತೆರಳುವರು.

    ಮದುವೆ ದಿನವೇ ಫಿಸಿಯೋಥೆರಪಿ ಎಕ್ಸಾಂ; ವಿವಾಹದ ದಿರಿಸಿನಲ್ಲೇ ಪರೀಕ್ಷೆಗೆ ಬಂದ ವಧು

    ಸಿಟ್ಟು ಸಿಕ್ಕಾಪಟ್ಟೆ ಹೆಚ್ಚಾಗಲೆಂದು 2 ತಿಂಗಳು ಔಷಧ ಬಿಟ್ಟಿದ್ದ; ಸಚಿವರನ್ನು ಕೊಂದ ಎಎಸ್​ಐ ಬಾಯ್ಬಿಟ್ಟ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts