ನವದೆಹಲಿ: ಮಹಾಮಾರಿ ಕರೊನಾ ಪ್ರಕರಣಗಳು ದೇಶಾದ್ಯಂತ ಮತ್ತೆ ಹೆಚ್ಚಳವಾಗುತ್ತಿರು ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಪ್ರಧಾನಿ ಮೋದಿ ಕರೊನಾ ನಿಯಂತ್ರಣಕ್ಕೆ ತರುವಂತೆ ಸೂಚನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ, ರಾಜ್ಯಗಳಲ್ಲಿ ಸದ್ಯದ ವಸ್ತು ಪರಿಸ್ಥಿತಿ ಮತ್ತು ಲಸಿಕೆ ವಿತರಣೆ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಲಸಿಕೆ ನೀಡುವ ಪ್ರಮಾಣ ಮತ್ತು ಕರೊನಾ ಟೆಸ್ಟ್ಗಳನ್ನು ಹೆಚ್ಚಿಸಿ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಪತ್ನಿ ಇರುವಾಗಲೇ ಇನ್ನೊಬ್ಬಳ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಕಾನೂನು ಏನು ಹೇಳುತ್ತದೆ?
ಇನ್ನು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲು ಪ್ರಧಾನಿ ಸೂಚಿಸಿದ್ದು, ಕರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹೇಳಿದ್ದಾರೆ. ಕರೊನಾ ನಿಯಂತ್ರಿಸಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳುವಂತೆ ಸಲಹೆ ಇದೇ ವೇಳೆ ಪ್ರಧಾನಿ ನೀಡಿದರು.
ವಿಧಾನ ಸೌಧ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸಂವಾದದಲ್ಲಿ ಭಾಗಿಯಾದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಕರೊನಾ ಸೋಂಕಿನಿಂದ ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ
ದೆಹಲಿ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಶವ ಪತ್ತೆ
ಲಾರಿ ಡಿಕ್ಕಿಯ ರಭಸಕ್ಕೆ ಕುಸಿದ ಹೋಟೆಲ್ ಕಟ್ಟಡ: ಅದೃಷ್ಟವಶಾತ್ ತಪ್ಪಿತು ಭಾರೀ ಅನಾಹುತ!