ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದ ಒಂದು ವಾರದ ಬಳಿಕ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್ ಅವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಭೂಮಿಪೂಜೆಯ ದಿನ ಗೋಪಾಲ ದಾಸ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.
ಈಗ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕ್ವಾರಂಟೈನ್ಗೆ ಒಳಗಾಗಲಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗೋಶಾಲೆಗಳಿಗೆ 200 ಕೋಟಿ ರೂ.ಸಾಂತ್ವನ ನಿಧಿ ವಿತ್ತ ಸಚಿವರಿಗೆ ಪೇಜಾವರ ಶ್ರೀ ಪತ್ರ
ಆಗಸ್ಟ್ 5ರಂದು ನಡೆದ ಅಯೋಧ್ಯೆ ರಾಮಮಂದಿರ ಭೂಮಿಪೂಜೆಯಂದು ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ ದಾಸ್ ಅವರೂ ಪಾಲ್ಗೊಂಡಿದ್ದರು. ನಂತರ ಅವರಲ್ಲಿ ಕರೊನಾ ದೃಢಪಟ್ಟಿದೆ. ಅಂದು ಮೋದಿಯವರೂ ಸಹ ಗೋಪಾಲ್ ದಾಸ್ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರು ಎಂದು ರಾವತ್ ಹೇಳಿದ್ದಾರೆ.
ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಬರೆದ ಲೇಖನದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದ್ದಾರೆ. ರಾಮಮಂದಿರ ಭೂಮಿಪೂಜೆಯ ದಿನ ಇಬ್ಬರೂ ಒಂದೇ ವೇದಿಕೆಯಲ್ಲಿದ್ದರು. ಮಹಾಂತ ನೃತ್ಯ ಗೋಪಾಲದಾಸ್ ಅವರು ಮಾಸ್ಕ್ ಧರಿಸಿರಲಿಲ್ಲ. ಇದೇ ವೇದಿಕೆಯಲ್ಲಿ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಕೂಡ ಇದ್ದರು. ಅಂದು ಮೋದಿಯವರು ಗೋಪಾಲದಾಸ್ ಅವರ ಕೈಯನ್ನೂ ಹಿಡಿದುಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದ ಪ್ರಧಾನಿಯವರೂ ಕ್ವಾರಂಟೈನ್ಗೆ ಒಳಗಾಗಬೇಕಲ್ಲವೇ? ಆಗುತ್ತಾರಾ ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್)
ಎಫ್ಐಆರ್ ದಾಖಲಿಸಿಕೊಳ್ಳಬೇಕೆಂದರೆ ಡಾನ್ಸ್ ಮಾಡು: ನೋವು ಬಿಚ್ಚಿಟ್ಟ 16ರ ಬಾಲಕಿ!