ಪಿಎಂಶ್ರೀ ವಿದ್ಯಾಲಯ ಗದಗ ಜಿಲ್ಲೆಯ ಹೆಮ್ಮೆ

blank

ಮುಂಡರಗಿ: ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯವು ಗದಗ ಜಿಲ್ಲೆಯ ಹೆಮ್ಮೆ. ಇಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಎಲ್ಲ ಮಕ್ಕಳು ಭಾಗ್ಯವಂತರು. ಮುಂದಿನ ದಿನಗಳಲ್ಲಿ ವಿದ್ಯಾಲಯದಿಂದ ಇನ್ನೂ ಉತ್ತಮ ಸಾಧಕರು ಹೊರಬರಬೇಕು. ಆ ಮೂಲಕ ಜಿಲ್ಲೆಗೆ, ನಾಡಿಗೆ ಮತ್ತು ದೇಶಕ್ಕೆ ಕೀರ್ತಿ ತರುವಂತಾಗಬೇಕು ಎಂದು ನಾಡೋಜ ಡಾ. ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ತಾಲೂಕಿನ ಕೊರ್ಲಹಳ್ಳಿ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಆಯೋಜಿಸಿದ್ದ ರಜತ ಮಹೋತ್ಸವ (ಬೆಳ್ಳಿಹಬ್ಬ) ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ವಿದ್ಯೆ ಸಂಪಾದನೆಯ ಜತೆಗೆ ಉತ್ತಮ ಸಂಸ್ಕೃತಿ ಬೆಳೆಸಿಕೊಂಡು ಇಂದಿನ ತಂತ್ರಜ್ಞಾನದ ಯುಗದಲ್ಲಿ ಬರುವ ಜೀವನದ ಸವಾಲುಗಳುಗಳೆದುರು ನೆಮ್ಮದಿ ಬದುಕು ಸಾಗಿಸುವ ಶಕ್ತಿ ವಿದ್ಯಾಲಯದ ಮಕ್ಕಳು ಪಡೆಯುತ್ತಿದ್ದಾರೆ ಎಂದರು.

ವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ಮತ್ತು ಬೇರೆ ವಿದ್ಯಾಲಯಗಳಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿರುವ ಸುಮಾರು 150 ಬೋಧಕ- ಬೋಧಕೇತರ ಸಿಬ್ಬಂದಿಗೆ ಗುರುವಂದನೆ ಸಲ್ಲಿಸಲಾಯಿತು. ನವೋದಯ ವಿದ್ಯಾಲಯ ಸಮಿತಿ ಅಪರ ಉಪಾಯುಕ್ತ ನಾಗಭೂಷಣಂ, ನಿವೃತ್ತ ಪ್ರಾಚಾರ್ಯ ಕಲ್ಯಾಣಿ, ನಿವೃತ್ತ ಉಪ ಪ್ರಾಚಾರ್ಯ ಜಿ.ಬಿ. ಮೇಸ್ತ್ರಿ, ವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ರುದ್ರಗೌಡ ಪಾಟೀಲ ಇದ್ದರು.

ಪ್ರಭಾರಿ ಪ್ರಾಚಾರ್ಯ ಜಿ.ಎಸ್. ಬಸವರಾಜು ಸ್ವಾಗತಿಸಿದರು. ರಾಜು ಕಾರ್ಯಕ್ರಮ ನಿರೂಪಿಸಿದರು. ಹಿರಿಯ ವಿದ್ಯಾರ್ಥಿ ಪ್ರದೀಪಕುಮಾರ ವಂದಿಸಿದರು.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…