ನವದೆಹಲಿ: ಲೋಕಸಭೆ ಅಧಿವೇಶನದಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮಯಿತ್ರಾ ಕೇಂದ್ರ ಸರ್ಕಾರದ ವಿರುದ್ಧ ಹೊಸ ಆರೋಪ ಒಂದನ್ನು ಮಾಡಿದ್ದು, ಉದ್ಯಮಿಯನ್ನು ಬೆದರಿಸಿ ನನ್ನ ವಿರುದ್ಧ ದೂರು ಕೊಡಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಎರಡು ಪುಟಗಳ ಪ್ರಕಟಣೆಯನ್ನು ಪೋಸ್ಟ್ ಮಾಡಿರುವ ಮೊಯಿತ್ರಾ, ಖಾಲಿ ಹಾಳೆಯ ಮೇಲೆ ಬೆದರಿಸಿ ಸಹಿ ಹಾಕಿಸಿ ಈ ರೀತಿಯ ಕೃತ್ಯ ಎಸಗಲಾಗಿದೆ ಎಂದು ಕಿಡಿಕಾರಿದ್ದಾರೆ.
ಉದ್ಯಮಿ ಸದನಕ್ಕೆ ಸಲ್ಲಿಸಿಸರುವ ಅಫಿಡೆವಿಟ್ನಲ್ಲಿ ಅಧಿಕೃತ ಲೆಟರ್ಹೆಡ್ ಅಥವಾ ಯಾವುದೇ ನೋಟಿರಯಾಗಿರುವುದಿಲ್ಲ. ಇದು ಒಬ್ಬ ಗೌರವಾನ್ವಿತ, ವಿದ್ಯಾವಂತ ಉದ್ಯಮಿಯೊಬ್ಬರು ಈ ರೀತಿ ಕೊಡುತ್ತಾರಾ. ಅವರನ್ನು ಬೆದರಿಸಿ ಹಾಳೆ ಮೇಲೆ ಸಹಿ ಮಾಡಿಸಲಾಗಿದ್ದು, ಉದ್ಯಮಿಯ ಕಡೆಯಿಂದ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿಸಲಾಗಿದೆ.
ಇದನ್ನೂ ಓದಿ: VIDEO| ಸಾರ್ವಜನಿಕರ ಎದುರಲ್ಲೇ ನ್ಯಾಯಾಧೀಶರನ್ನು ನಿಂದಿಸಿ ಹಲ್ಲೆ ಮಾಡಿದ ಪುಂಡರು
ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಿನಿಗೆ ಸಿಬಿಐ, ನೈತಿಕ ಸಮಿತಿ ಅಥವಾ ಯಾವುದೇ ತನಿಖಾ ಸಂಸ್ಥೆ ಇನ್ನೂ ಸಹ ನೋಟಿಸ್ ನೀಡಿಲ್ಲ. ಹಾಗಾದರೆ ಅವರು ಈ ಅಫಿಡವಿಟ್ಅನ್ನು ಯಾರಿಗೆ ನೀಡಿದ್ದಾರೆ. ಪತ್ರದಲ್ಲಿ ಉಲ್ಲೇಖಿಸಿರುವ ವಿಚಾರಗಳು ಬಿಜೆಪಿಯ ಐಟಿ ಸೆಲ್ ಹಾಗೂ ಪ್ರಧಾನಿ ಕಚೇರಿಯಲ್ಲಿರುವವರು ಇದನ್ನು ರಚಿಸಿದ್ದಾರೆ ಎಂದು ಸ್ಪಷ್ಟವಾಗಿ ತಿಳಿಯುತ್ತಿದೆ.
ದೇಶದಲ್ಲಿ ಅತಿದೊಡ್ಡ ಉದ್ಯಮವನ್ನು ಹೊಂದಿರುವ ಹಿರಾನಂದಿನಿ ಸಮೂಹದ ಯೋಜನೆಗಳನ್ನು ಇತ್ತೀಚಿಗೆ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಇದಲ್ಲದೆ ದರ್ಶನ್ ಪ್ರಧಾನಿ ಮೋದಿ ಜೊತೆಗೆ ವಿದೇಶ ಪ್ರವಾಸಕ್ಕೆ ಸಹ ಹೋಗಿದ್ದಾರೆ. ಪ್ರಧಾನಿ ಮತ್ತು ಅವರ ಮಂತ್ರಿಮಂಡಲದೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯು ಅಧಿವೇಶನದಲ್ಲಿ ಪ್ರಶ್ನೆಗಳನ್ನು ಕೇಳಲು ನನ್ನಗ್ಯಾಕೆ ಲಂಚ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಉದ್ಯಮಿ ಹಿರಾನಂದಿನಿ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡದೆ ಏಕೆ ಈ ರೀತಿಯ ಆರೋಪಗಳನ್ನು ಮಾಡಿದ್ದಾರೆ. ಈ ಮೂಲಕ ಸ್ಪಷ್ಟವಾಗಿರುವುದು ಏನೆಂದರೆ ಈ ಪತ್ರವನ್ನು ಉದ್ಯಮಿಯ ಹೆಸರಿನಲ್ಲಿ ಪ್ರಧಾನಿ ಕಚೇರಿ ಹಾಗೂ ಬಿಜೆಪಿಯ ಐಟಿ ಸೆಲ್ ಸಿದ್ದಪಡಿಸಿ ನನ್ನ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ದಳಿದ್ದೇನೆ ಎಂದು ಸಂಸದೆ ಮಹುವಾ ಮೊಯಿತ್ರಾ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.