ಸದ್ಯದಲ್ಲೇ ಹೊಸ ಪೊಗರು; ಆಕ್ಷೇಪಾರ್ಹ ದೃಶ್ಯಗಳನ್ನು ಕತ್ತರಿಸಲು ಒಪ್ಪಿಗೆ

ಬೆಂಗಳೂರು: ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಬ್ರಾಹ್ಮಣರ ಕ್ಷಮೆ ಕೇಳಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ, ಭಾನುವಾರವೇ ‘ವಿಜಯವಾಣಿ’ ಜತೆಗೆ ಮಾತನಾಡುವ ಸಂದರ್ಭದಲ್ಲಿ ನಿರ್ದೇಶಕ ನಂದಕಿಶೋರ್ ಕ್ಷಮೆ ಕೇಳಿದ್ದರು. ಮಂಗಳವಾರ, ಇನ್ನೊಮ್ಮೆ ಕ್ಷಮೆ ಕೇಳುವುದರ ಜತೆಗೆ, ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಪ್ರಯೋಗ ಮಾಡುವುದಕ್ಕೆ ಒಪ್ಪಿಕೊಂಡಿದ್ದಾರೆ. ಬ್ರಾಹ್ಮಣರನ್ನು ಚಿತ್ರದಲ್ಲಿ ಅವಮಾನಿಸಿರುವ ಹಿನ್ನೆಲೆಯಲ್ಲಿ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಎರಡು ದಿನಗಳ ಹಿಂದೆಯೇ ಒತ್ತಾಯಿಸಿತ್ತು. ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ … Continue reading ಸದ್ಯದಲ್ಲೇ ಹೊಸ ಪೊಗರು; ಆಕ್ಷೇಪಾರ್ಹ ದೃಶ್ಯಗಳನ್ನು ಕತ್ತರಿಸಲು ಒಪ್ಪಿಗೆ