ಭುವನೇಶ್ವರ್: ಒಡಿಶಾದ ಜಾಜ್ಪುರ್ ಜಿಲ್ಲೆಯ ಕೌಖಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆ ಬದಿಯಲ್ಲಿ ಜನವರಿ 27ರಂದು ಯುವತಿಯ ಮೃತದೇಹವೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಮೃತ ಯುವತಿಯನ್ನು ಜರಾಫುಲಾ ನಾಯಕ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಜಾಜ್ಪುರ್ ಪೊಲೀಸರು ಕಮಿಷನರೇಟ್ ಪೊಲೀಸ್ ಸಹಕಾರದೊಂದಿಗೆ ಸುಂದರ್ಪಾದ ಏರಿಯಾದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸದ್ಯ ಜಾಜ್ಪುರ್ ಪೊಲೀಸರ ವಶದಲ್ಲಿರುವ ರಾಕೇಶ್ನನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿರಿ: ಪತ್ನಿ ತುಂಬಾ ಚೆಲ್ಲುಚೆಲ್ಲು, ಹುಟ್ಟುವ ಮಗುವಿನ ಡಿಎನ್ಎ ಪರೀಕ್ಷೆ ಮಾಡಿಸಬಹುದಾ?
ಯುವತಿ ಜರಾಫುಲಾ ಮಯೂರ್ಬಂಜ್ ಜಿಲ್ಲೆಯ ನಿವಾಸಿ. ಆರ್ಡಿ ಮಹಿಳಾ ಯೂನಿವರ್ಸಿಟಿಯ ವಿದ್ಯಾರ್ಥಿನಿಯಾಗಿದ್ದ ಜರಾಫುಲಾಳನ್ನು ಭುವನೇಶ್ವರದಲ್ಲಿ ಕೊಲೆ ಮಾಡಲಾಗಿದೆ. ಆರೋಪಿ ರಾಕೇಶ್ ಸಾಕ್ಷ್ಯಾಧಾರಗಳನ್ನು ನಾಶ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.
ಆಘಾತಕಾರಿಯೆಂದರೆ ಕೊಲೆ ಮಾಡಿದ ಬಳಿಕ ಜರಾಪುಲಾಳ ಮೃತದೇಹವನ್ನು ರಾಕೇಶ್ ತನ್ನ ಸ್ನೇಹಿತನ ಜತೆ ಸೇರಿಕೊಂಡು ಮುಲಪಲಾದಲ್ಲಿ ಎಸೆದು ಬಂದಿದ್ದರು. ಸ್ಕೂಟರ್ನಲ್ಲಿ ಮೃತದೇಹವನ್ನು ಕೂರಿಸಿಕೊಂಡು ಹೋಗಿ ಯಾರಿಗೂ ಗೊತ್ತಾಗದಂತೆ ಎಸೆದುಬಂದಿದ್ದರು. ಇದೀಗ ರಾಕೇಶ್ ಬಂಧಿಯಾಗಿದ್ದು, ಸ್ಕೂಟರ್ ಓಡಿಸುತ್ತಿದ್ದ ರಾಕೇಶ್ ಸ್ನೇಹಿತ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಓರ್ವ ಡಿಸಿಪಿ ಪ್ರಕರಣ ಸಮಗ್ರ ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿರಿ: ಸೆಕ್ಸ್ ವೇಳೆ ದುರಂತ ಸಾವಿಗೀಡಾದ ವ್ಯಕ್ತಿ: ಮರಣೋತ್ತರ ವರದಿಯಲ್ಲಿತ್ತು ಬೆಚ್ಚಿಬೀಳಿಸೋ ಸಂಗತಿ!
ಜನವರಿ 27ರಂದು ಒಡಿಶಾದ ಜಾಜ್ಪುರ್ ಜಿಲ್ಲೆಯ ಕೌಖಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆಯ ಬದಿಯಲ್ಲಿ ಪತ್ತೆಯಾಗಿದ್ದ ಜರಾಪುಲಾಳ ಮೃತದೇಹವನ್ನು ಪಕ್ಕದಲ್ಲಿ ಬಿದ್ದಿದ್ದ ಬ್ಯಾಗ್ನಲ್ಲಿದ್ದ ಮಾಹಿತಿ ಆಧಾರದಲ್ಲಿ ಪತ್ತೆಹಚ್ಚಲಾಗಿತ್ತು.
ಜರಾಫುಲಾ ಎಲ್ಲಿಗೆ ಹೋಗಿದ್ದಳು?
ಈ ಬಗ್ಗೆ ಮಾಹಿತಿ ನೀಡಿರುವ ಜಲಾಫುಲಾ ತಂದೆ ರಮಾಕಾಂತ್, ಜನವರಿ 24ರಂದು ಜಲಾಫುಲಾ ಆಕೆಯ ಚಕ್ರಧರ್ ಟೀಚರ್ ಮಗಳ ಬರ್ತಡೇ ಕಾರ್ಯಕ್ರಮಕ್ಕೆಂದು ತೆರಳಿದ್ದಳು. 25ರಂದು ಬರ್ತಡೇ ಸಮಾರಂಭ ನಡೆದಿತ್ತು. ಮಾರನೇ ದಿನ ಅಂದರೆ 26ನೇ ತಾರೀಖು ಬೆಳಗ್ಗೆ 11 ಗಂಟೆಗೆ ಚಕ್ರಧರ್, ಜಲಾಫುಲಾಳನ್ನು ಜಯದೇವ್ ವಿವಾರ್ ಸ್ಕ್ವೇರ್ಗೆ ಡ್ರಾಪ್ ಮಾಡಿದ್ದರು. ಖಾಸಗಿ ಬಸ್ ಮೂಲಕ ಊರಿಗೆ ಮರಳಲು ಮುಂದಾಗಿದ್ದಳು. ಹೊಟ್ಟೆ ನೋವಿದೆ ಆಸ್ಪತ್ರೆಗೆ ಹೋಗಿ ನಂತರ ಬಸ್ನಲ್ಲಿ ಊರಿಗೆ ಮರಳುತ್ತೇನೆಂದು ಹೇಳಿದ್ದಳು. ಆದರೆ, ಮಧ್ಯಾಹ್ನ 3 ಗಂಟೆಗೆ ಫೋನ್ ಮಾಡಿ, ಹೊಟ್ಟೆ ನೋವಿದೆ, ಫ್ರೆಂಡ್ಸ್ ಮನೆಯಲ್ಲಿ ಉಳಿದುಕೊಂಡಿರುವುದಾಗಿ ಮತ್ತು ನಾಳೆ ಬೆಳಗ್ಗೆ ಬರುವುದಾಗಿ ಹೇಳಿದಳು. ಅಂದು ರಾತ್ರಿಯಿಡಿ ಎಷ್ಟೇ ಫೋನ್ ಮಾಡಿದರು ಸ್ವೀಕರಿಸಲಿಲ್ಲ. ಚಕ್ರಧರ್ ಸರ್ ಒಬ್ಬರೇ ಭುವನೇಶ್ವರದಲ್ಲಿ ಆಕೆಯ ಸ್ಥಳೀಯ ರಕ್ಷಕರಾಗಿದ್ದರು ಎನ್ನುತ್ತಾರೆ ರಮಾಕಾಂತ್.
ಇದನ್ನೂ ಓದಿರಿ: ಟಿಕ್ಟಾಕ್ನಲ್ಲಿ ಅರೆಬೆತ್ತಲೆ ವಿಡಿಯೋ ಹರಿಬಿಡ್ತಿದ್ದ ಪ್ರಭಾವಿ ಮಹಿಳೆ ಗಂಡನಿಂದಲೇ ದುರಂತ ಅಂತ್ಯ!
ಸ್ಥಳೀಯ ಯುವಕ ಮೇಲೆ ಗಂಭೀರ ಆರೋಪ
ಹೀಗಿರುವಾಗ ಜರಾಫುಲಾಳ ಮೃತದೇಹ ಮಾರನೇ ದಿನ ಅಂದರೆ ಜ. 27ರಂದು ಮುಲಪಲಾದ ರಸ್ತೆಯ ಬದಿಯಲ್ಲಿ ಪತ್ತೆಯಾಗುತ್ತದೆ. ಮೃತದೇಹವನ್ನು ಪಕ್ಕದಲ್ಲಿ ಬಿದ್ದಿದ್ದ ಬ್ಯಾಗ್ನಲ್ಲಿದ್ದ ಮಾಹಿತಿ ಆಧಾರದಲ್ಲಿ ವಿಳಾಸವನ್ನು ಪತ್ತೆ ಹಚ್ಚಿ ಮಾಹಿತಿ ನೀಡಲಾಗುತ್ತದೆ. ಇದರಿಂದ ಶಾಕ್ ಆಗುವ ಕುಟುಂಬ ಶೋಕ ಸಾಗರದಲ್ಲಿ ಮುಳುಗುತ್ತದೆ. ಮಗಳ ಕೊಲೆಯಾಗಿದೆ ಎಂದು ಗೊತ್ತಾದ ತಕ್ಷಣವೇ ಸ್ಥಳೀಯ ಯುವಕನ ವಿರುದ್ಧ ಜರಾಫುಲಾಳ ತಂದೆ ಗಂಭೀರ ಆರೋಪ ಮಾಡಿದ್ದಾರೆ. ಕೊಲೆಗೆ ಆತನೇ ಕಾರಣ ಎಂದು ದೂರಿದ್ದಾರೆ. ಆತನೇ ರಾಕೇಶ್.
ಊರಿನಲ್ಲಿ ಪೈಪ್ಲೈನ್ ಕೆಲಸ ಮಾಡಿಕೊಂಡಿದ್ದ ರಾಕೇಶ್ ನನ್ನ ಮಗಳನ್ನು ಲವ್ ಮಾಡುತ್ತಿದ್ದ. ಲಾಕ್ಡೌನ್ ಬಳಿಕ ಯೂನಿವರ್ಸಿಟಿ ಬಿಟ್ಟು ಮಗಳು ಊರಿಗೆ ಬಂದಿದ್ದಾಗ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು. ಇಬ್ಬರು ವಾಟ್ಸ್ಆ್ಯಪ್ ಮತ್ತು ವಿಡಿಯೋ ಕಾಲ್ ಮೂಲಕ ಮಾತನಾಡುತ್ತಿದ್ದರು ಎಂದು ರಮಾಕಾಂತ್ ದೂರಿದ್ದಾರೆ.
ಇದನ್ನೂ ಓದಿರಿ: ಪತಿಗೆ ಬ್ಲೂಫಿಲಂ ನೋಡುವ ಚಟ- ಮಧ್ಯರಾತ್ರಿಯೂ ಎದ್ದು ವೀಕ್ಷಿಸುತ್ತಾರೆ, ಇದನ್ನು ತಪ್ಪಿಸುವುದು ಹೇಗೆ?
ಆರೋಪಿ ರಾಕೇಶ್ ಸಿಕ್ಕಿಬಿದ್ದಿದ್ಹೇಗೆ?
ಸಂಶಯಾಸ್ಪದ ರೀತಿಯಲ್ಲಿ ಜರಾಫುಲಾಳ ಮೃತದೇಹ ಪತ್ತೆಯಾದ ಮೇಲೆ ಅನುಮಾನಗೊಂಡ ಪೊಲೀಸರು ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಾರೆ. ಇಬ್ಬರು ಯುವಕರು ಸ್ಕೂಟರ್ನಲ್ಲಿ ಬಂದು ಯುವತಿಯ ಮೃತದೇಹವನ್ನು ಎಸೆದು ಸ್ಕೂಟರ್ನಲ್ಲಿ ಪರಾರಿಯಾಗುವ ದೃಶ್ಯ ದಾಖಲಾಗಿರುತ್ತದೆ. ಸ್ಥಳೀಯರು ಸಹ ಇಬ್ಬರು ಯುವಕರು ಸ್ಕೂಟರ್ನಲ್ಲಿ ಬಂದಿದ್ದಾಗಿ ಹೇಳುತ್ತಾರೆ. ಪ್ರಕರಣ ದಾಖಲಿಸಿಕೊಂಡು ಅಖಾಡಕ್ಕೆ ಇಳಿದ ಜಾಜ್ಪುರ್ ಪೊಲೀಸರು ಆರೋಪಿ ರಾಕೇಶ್ನನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ. (ಏಜೆನ್ಸೀಸ್)
ಈ ಹುಡುಗನಿಗಾಗಿ ಲಂಡನ್ ತೊರೆದು ಕಾಡಿನಲ್ಲಿರುವ ಬೆತ್ತಲೆ ಯೋಗ ಶಿಕ್ಷಕಿ: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
35ರ ಶಿಕ್ಷಕಿ 15ರ ವಿದ್ಯಾರ್ಥಿಯನ್ನು ಪುಸಲಾಯಿಸಿದ್ಹೇಗೆ? ಇಬ್ಬರ ನಡುವಿನ ಸೆಕ್ಸ್ ಚಾಟ್ ಬಹಿರಂಗ!
ಎಟಿಎಂ ಕೀಪ್ಯಾಡ್ ನೆಕ್ಕಿ ಅಶ್ಲೀಲ ಪದ ಪ್ರಯೋಗಿಸಿದ ಅಪರಿಚಿತ: ಬೆಚ್ಚಿಬಿದ್ದ ಮಹಿಳೆಯಿಂದ ದೂರು!