More

    ಹರ್ಷ ಕೊಲೆ ಪ್ರಕರಣ: ಒಟ್ಟು ಎಂಟು ಆರೋಪಿಗಳ ಬಂಧನ

    ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳ ಬಂಧನವಾಗಿದ್ದು, ಬಂಧಿತ ಆರೋಪಿಗಳ ಸಂಖ್ಯೆ ಎಂಟಕ್ಕೆ ತಲುಪಿದೆ. ಈ ಮೂಲಕ ಪ್ರಕರಣದ ಕುರಿತು ಮತ್ತಷ್ಟು ಬೆಳವಣಿಗೆಗಳಾಗಿವೆ.

    ಇಂದು ಮತ್ತಿಬ್ಬರು ಆರೋಪಿಗಳಾದ ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಅವರನ್ನು ಬಂಧಿಸಲಾಗಿದೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಇನ್ನು ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಇಂದು ಮತ್ತೆ ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನಿನ್ನೆ ಮೊಹಮ್ಮದ್ ಖಾಸೀಫ್ ಹಾಗೂ ಸಯ್ಯದ್ ನದೀಂ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

    ಆರೋಪಿಗಳಾದ ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೊಲೆ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರು ಆರೋಪಿಗಳಿಗೆ ಮಾರ್ಚ್ 7 ರವರೆಗೆ ನ್ಯಾಯಾಂಗ ಬಂಧನ ಇರಲಿದೆ.

    ಶಾಲೆಗೆ ಹೋಗು ಎಂದಿದ್ದಕ್ಕೆ ಸತ್ತೇ ಹೋದ್ಲು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts