More

    ಪ್ರೊ.ಕೆ.ಎಸ್​.ಭಗವಾನ್ ವಿರುದ್ಧ ಪೊಲೀಸರಿಗೆ ದೂರು; ಶ್ರೀರಾಮನಿಗೆ ಅವಹೇಳನ ಪ್ರಕರಣ

    ಮಂಡ್ಯ: ಹಿಂದೂ ದೇವರಾದ ಶ್ರೀರಾಮನ ವಿರುದ್ಧ ಆಗಾಗ ಅವಹೇಳನಕಾರಿಯಾಗಿ ಮಾತನಾಡುವ ಪ್ರೊ.ಕೆ.ಎಸ್​. ಭಗವಾನ್​ ಇತ್ತೀಚೆಗಷ್ಟೇ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊ. ಭಗವಾನ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

    ರಾಮ ಸೀತೆಗೆ ಹೆಂಡ ಕುಡಿಸಿ ತಾನೂ ಕುಡಿಸುತ್ತಿದ್ದ ಎಂದು ಕೆ.ಆರ್​.ಪೇಟೆಯಲ್ಲಿ ಇತ್ತೀಚೆಗೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್​ನವರು ಭಗವಾನ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ರಾಮ ಹಾಗೂ ಸೀತಾ ಮಾತೆಯ ಕುರಿತು ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿರುವುದು ತಪ್ಪು. ಪದೇಪದೆ ಈ ರೀತಿ ಮಾತನಾಡುತ್ತಿರುವ ಭಗವಾನ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯರು ಉಲ್ಲೇಖಿಸಿದ್ದಾರೆ.

    ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

    ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!

    ಪೈಲಟ್ ಕೆಲಸಕ್ಕೇ ಮುಳುವಾದ ‘ಮೂತ್ರ ವಿಸರ್ಜನೆ’; ಏರ್​ ಇಂಡಿಯಾದ ಪ್ರಕರಣ ‘ಒಂದಕ್ಕೆ’ 30 ಲಕ್ಷ ರೂ. ದಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts