ಬೀದರ್: ಕರೊನಾ ಸೋಂಕಿಗೆ ಜಿಲ್ಲೆಯಲ್ಲಿ ನಾಲ್ಕೇ ದಿನಗಳಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಂದು ಪೊಲೀಸ್ ಕಾನ್ಸ್ಟೆಬಲ್ ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಟಕ್ ಚಿಂಚೋಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇವರು ಚಳಿ, ಜ್ವರದಿಂದ ಆಗಸ್ಟ್ 15ರಂದು ಹುಮನಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆ್ಯಂಟಿಜೆನ್ ಟೆಸ್ಟ್ನಲ್ಲಿ ಇವರಿಗೆ ಕರೊನಾ ಇರುವುದು ದೃಢಪಟ್ಟಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರು ಹುಮನಾಬಾದ್ ತಾಲೂಕಿನ ಹಂದಿಕೆರಾ ಗ್ರಾಮದ ನಿವಾಸಿಯಾಗಿದ್ದರು.