ಗುಂಡ್ಯ ಬಳಿ ಗುಂಡೇಟು; ಪೊಲೀಸರತ್ತ ತಲವಾರ್ ಬೀಸಿದ ಕೊಲೆ ಆರೋಪಿ ಖಲೀಲ್​ ಕಾಲಿಗೆ ಫೈರಿಂಗ್​..

blank

ಮಂಗಳೂರು: ನಿನ್ನೆಯಷ್ಟೇ ಕೊಲೆ ಮಾಡಿದ್ದ ಆರೋಪಿ ಮೇಲೆ ಇಂದು ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಬಳಿ ಈ ಫೈರಿಂಗ್ ನಡೆದಿದೆ. ನಿನ್ನೆ ಬಂಟ್ವಾಳದ ಮೇಲ್ಕಾರ್ ಬಳಿ ನಡೆದಿದ್ದ ಉಮಾರ್ ಫಾರೂಕ್ ಕೊಲೆ ಆರೋಪಿ ಖಲೀಲ್ ಮತ್ತು ತಂಡ ಕಾರಿನಲ್ಲಿ ತೆರಳುತ್ತಿತ್ತು. ಇದನ್ನು ತಿಳಿದ ಪೊಲೀಸರು ಚೇಸ್​ ಮಾಡಿ ಕಾರಿಗೆ ಅಡ್ಡ ಹಾಕಿದ್ದಾರೆ.

ಆದರೆ ಚೇಸ್​ ಮಾಡಿರುವ ಬಂಟ್ವಾಳ ಎಸ್​​ಐಗಳಾದ ಅವಿನಾಶ್ ಮತ್ತು ಪ್ರಸನ್ನ ಟೀಂ ಮೇಲೆ ಆರೋಪಿ ಖಲೀಲ್​ ತಲವಾರ್ ಬೀಸಿದ್ದಾನೆ. ಆಗ ಎಸ್​ಐ ಅವಿನಾಶ್​ ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭ ಮತ್ತೊಬ್ಬ ಎಸ್​ಐ ಪ್ರಸನ್ನ ಅವರಿಗೆ ಸಣ್ಣ ಗಾಯವಾಗಿದ್ದು, ಈ ವೇಳೆ ಹಫೀಜ್​ ಹಾಗೂ ಇನ್ನೊಬ್ಬ ಆರೋಪಿ ಪರಾರಿ ಆಗಿದ್ದಾರೆ.

ಆರೋಪಿಗಳು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್‌ ಫಾರೂಕ್​ನನ್ನು ನಿನ್ನೆ ಬಂಟ್ವಾಳ ತಾಲೂಕಿನ ಮೇಲ್ಕಾರ್ ಸಮೀಪದ ಬೊಂಡೋಡಿ ಎಂಬಲ್ಲಿ ಹಾಡಹಗಲೇ ಹತ್ಯೆ ಮಾಡಿದ್ದರು. ಮಾರಕಾಯುಧಗಳಿಂದ ದಾಳಿ ಮಾಡಿ ಅವರು ಕೊಲೆ ಮಾಡುತ್ತಿರುವ ದೃಶ್ಯದ ವಿಡಿಯೋ ತುಣುಕು ಕೂಡ ಪೊಲೀಸರಿಗೆ ಲಭಿಸಿದೆ.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…