ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಲಗ್ಗೆರೆ ಕೂಲಿ ಬ್ರಿಜ್ ಸಮೀಪ ಮಂಗಳವಾರ ನಸುಕಿನಲ್ಲಿ ಶೂಟೌಟ್ ನಡೆದಿದ್ದು, ದರೋಡೆಕೋರನ ಕಾಲಿಗೆ ಗುಂಡೇಟು ತಗುಲಿದೆ. ಹೆಡ್ಕಾನ್ಸ್ಟೆಬಲ್ ಒಬ್ಬರಿಗೂ ಗಾಯವಾಗಿದೆ. ನಂದಿನ ಬಡಾವಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು.
ದರೋಡೆಕೋರನನ್ನು ಅನುಬನ್ ಎಂದು ಗುರುತಿಸಲಾಗಿದೆ. ಈತನ ಸಹಚರ ಅನ್ವರ್ ಎಂಬಾತನನ್ನು ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧರಿಸಿ ಕೂಲಿನಗರದಲ್ಲಿ ತಲೆಮರೆಸಿಕೊಂಡಿದ್ದ ಅನುಬನ್ ಬಂಧನಕ್ಕೆ ಪೊಲೀಸರು ಪಿಎಸ್ಐ ಜೋಗಾನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಅನುಬನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ಯಾಗರ್ ಬೀಸಿದ್ದು, ಹೆಡ್ಕಾನ್ಸ್ಟೆಬಲ್ ಅಭಿಷೇಕ್ ಅವರಿಗೆ ತಗುಲಿ ಗಾಯಗೊಂಡಿದ್ದಾರೆ. ಕೂಡಲೇ ಆರೋಪಿಯ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಆತ ಕುಸಿದ ನಂತರ ಬಂಧಿಸಿದ್ದಾರೆ.
ಇದನ್ನೂ ಓದಿ: ಮೂತ್ರಪಿಂಡಗಳು ಆರೋಗ್ಯವಾಗಿರಬೇಕೆಂದರೆ ಏನು ಮಾಡಬೇಕು ಗೊತ್ತೇ?
ಆರೋಪಿಗಳು ಇತ್ತೀಚೆಗೆ ನಂದಿನಿ ಲೇಔಟ್ ರಿಂಗ್ ರೋಡ್ನಲ್ಲಿ ಲಾರಿ ಡ್ರೈವರ್ ಒಬ್ಬರಿಗೆ ಚಾಕುವಿನಿಂದ ಇರಿದು 30,000 ರೂಪಾಯಿ ನಗದು ಮತ್ತು ಮೊಬೈಲ್ ಫೋನ್ ದೋಚಿದ್ದರು. ಈ ಕೇಸ್ಗೆ ಸಂಬಂಧಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಗಾಯಗೊಂಡ ಆರೋಪಿ ಮತ್ತು ಹೆಡ್ಕಾನ್ಸ್ಟೆಬಲ್ ಅವರನ್ನು ಕಣ್ವಶ್ರೀ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಾಂತಿಕಾರಿ ಬದಲಾವಣೆಗೆ ಸರ್ಕಾರ ಸನ್ನದ್ಧ: ಶಿಕ್ಷಣ ನೀತಿಯಲ್ಲಿ ಸಮಾನತೆ ಉತ್ತೇಜನ