ಬೆಂಗಳೂರು: ಎರಡು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಗರದ ಕೆ.ಎಸ್. ಲೇಔಟ್ನ ದೇವರಕೆರೆ ಬಳಿ ನಡೆದಿದೆ.
ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು ನಂತರ ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಲವೇ ದಿನಗಳ ಹಿಂದಷ್ಟೇ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಸಂಜಯ್ ಡಬಲ್ ಮರ್ಡರ್ ಮಾಡಿದ್ದ. ನಿನ್ನೆ ರಾತ್ರಿ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಆಗ ಸುಬ್ರಹ್ಮಣ್ಯಪುರ ಠಾಣೆ ಸಬ್ ಇನ್ಸ್ಪೆಕ್ಟರ್ ಮಧು ಅವರ ಮೇಲೆ ಸಂಜಯ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ.
ಇದೇ ವೇಳೆ ಕೋಣನಕುಂಟೆ ಇನ್ಸ್ಪೆಕ್ಟರ್ ಧರ್ಮೇಂದ್ರ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ.