More

    ಠಾಣೆಯ ಆವರಣದಲ್ಲೇ ಪೊಲೀಸರಿಂದ ಇಸ್ಪೀಟ್ ಜೂಜಾಟ!

    ದಾವಣಗೆರೆ: ಜೂಜಾಟ ಆಡುವವರನ್ನು ಬಂಧಿಸಬೇಕಾದ ಪೊಲೀಸರೇ ಇಸ್ಪೀಟ್ ಆಡುವುದೆಂದರೆ? ಅದೂ ಪೊಲೀಸ್ ಠಾಣೆಯ ಆವರಣದ ವಿಶ್ರಾಂತಿ ಕೊಠಡಿಯಲ್ಲೇ ಇಂಥದೊಂದು ಕಾನೂನು ಬಾಹಿರ ಕೃತ್ಯ ನಡೆದರೆ ಹೇಗೆ?

    ದಾವಣಗೆರೆಯ ಗ್ರಾಮಾಂತರ ಠಾಣೆಯು ಈ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಪೂರ್ವ ವಲಯ ಐಜಿಪಿ ಆದೇಶದಂತೆ ಸೋಮವಾರ ರಾತ್ರಿ ದಾಳಿ ನಡೆಸಿದ ಐಜಿ ಸ್ಕ್ವಾಡ್‌ನ ತಂಡಕ್ಕೆ ಐವರು ಪೊಲೀಸರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರಿಂದ 29 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಹೃದ್ರೋಗಿಯನ್ನು ದಾರಿ ಮಧ್ಯೆಯೇ ಬಸ್ಸಿನಿಂದ ಇಳಿಸಿದ ಜನ!

    ಕಾನ್‌ಸ್ಟೇಬಲ್‌ಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್, ಬಾಲರಾಜ್ ಅವರನ್ನು ವಶಕ್ಕೆ ಪಡೆಯಲಾಗಿದ್ದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡಿವೈಎಸ್ಪಿ ತಿರುಮಲೇಶ್, ಪೊಲೀಸ್ ಇನ್‌ಸ್ಪೆಕ್ಟರ್ ಶಂಕರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

    ಹಳ್ಳಿಗಳಿಗೆ ಕಾಲಿಟ್ಟ ಕೊವಿಡ್​-19; ಸೋಂಕು ಮಣಿಸಲು ಹಳ್ಳಿಗರು ತೆಗೆದುಕೊಂಡ ನಿರ್ಧಾರ ಅನುಕರಣೀಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts