ಹುಬ್ಬಳ್ಳಿ: ಹಿಂದು ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಇನ್ಸ್ಟೆಕ್ಟರ್ ಎತ್ತಂಗಡಿ ಆಗಿದ್ದು, ಇಲಾಖೆಯಿಂದ ವರ್ಗಾವಣೆ ಆದೇಶ ಹೊರಬಿದ್ದಿದೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಮಹಾಂತೇಶ ಹೋಳಿ ಎತ್ತಂಗಡಿ ಆಗಿರುವ ಇನ್ಸ್ಪೆಕ್ಟರ್. ಹಿಂದು ಸಂಘಟನೆಯ ಕಾರ್ಯಕರ್ತ ಮಲ್ಲಿಕಾರ್ಜುನ ಸತ್ತಿಗೇರೆ ಎಂಬವರ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇರೆಗೆ ಇಲಾಖೆ ಇವರನ್ನು ಎತ್ತಂಗಡಿ ಮಾಡಿದೆ.
ಇದನ್ನೂ ಓದಿ: ಅಮ್ಮನಾದ ನಟಿ ಪ್ರಣೀತಾ; ಮುನ್ನಾಭಾಯಿ ಎಂಬಿಬಿಎಸ್ ಚಿತ್ರದ ದೃಶ್ಯ ನೆನಪಿಸಿಕೊಂಡಿದ್ದೇಕೆ?
ಕಿಮ್ಸ್ ಆವರಣದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ ವಿಚಾರವಾಗಿ ನಡೆದಿದ್ದ ಗಲಾಟೆ ವೇಳೆ ಮಲ್ಲಿಕಾರ್ಜುನ ಸತ್ತಿಗೇರೆ ಮೇಲೆ ಮಹಾಂತೇಶ ಹೋಳಿ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಇವರನ್ನು ಹುಬ್ಬಳ್ಳಿಯ ಸಿಸಿಬಿಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.
ಕೋವಿಡ್ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!