ಮುಂಬೈ: ಇಸ್ಲಾಂ ಧರ್ಮದಲ್ಲಿ ಮಹತ್ವದ ತಿಂಗಳು ಎಂದರೆ ಅದು ರಂಜಾನ್ ಎಂದು ಹೇಳಬಹುದಾಗಿದೆ. ಮುಸ್ಲಿಂ ಭಾಂದವರು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ಪ್ರಾರ್ಥನೆ ಸಲ್ಲಿಸಿ ದಾನ ಅಥವಾ ಅಗತ್ಯವಿರುವವರಿಗೆ ಸಹಾಯ ಮಾಡುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ವಿಶ್ವದಾದ್ಯಂತ ಇಂದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸೆಲೆಬ್ರಿಟಿಗಳು ತಮ್ಮ ಕೆಲಸಗಳಿಗೆ ಬಿಡುವು ನೀಡಿ ಹಬ್ಬವನ್ನು ಆಚರಿಸುತ್ತಿದ್ದಾರೆ.
ಅದರಂತೆ ಈದ್ ಹಬ್ಬದ ಆಚರಣೆಯಲ್ಲಿ ಬಾಲಿವುಡ್ ಖಾನ್ತ್ರಯರಾದ ಶಾರುಖ್, ಸಲ್ಮಾನ್ ಹಾಗೂ ಆಮೀರ್ ಭಾಗಿಯಾಗಿದ್ದಾರೆ. ಅದರಂಎತ ಅವರನ್ನು ನೋಡಲು ಅಭಿಮಾನಿಗಳು ಅವರ ನಿವಾಸದ ಬಳಿ ಜಮಾಯಿಸಿದ್ದು, ಹಬ್ಬದ ದಿನದಂದು ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ., ನೆಚ್ಚಿನ ನಟನನ್ನು ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಈದ್ ಪ್ರಯುಕ್ತ ಖಾನ್ತ್ರಯರಾದ ಸಲ್ಮಾನ್, ಶಾರುಖ್ ಹಾಗೂ ಆಮೀರ್ ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ಶುಭಾಶಯ ಕೋರುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಅದರಂತೆ ಶಾರುಖ್ ಹಾಗೂ ಆಮೀರ್ ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದು, ಸಲ್ಮಾನ್ ಖಾನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಸಿಎಂ ಬಿಜೆಪಿ ಸೇರುತ್ತಾರೆ: ಬಿಆರ್ಎಸ್ ನಾಯಕ ಕೆಟಿಆರ್
ನೆಚ್ಚಿನ ನಟನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರು ಸಲ್ಮಾನ್ ಮನೆಯಿಂದ ಹೊರಬಾರದ ಕಾರಣ ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಮಹಿಳೆಯರು ಕೂಡ ಪೊಲೀಸರ ಲಾಠಿ ಏಟು ತಿಂದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಂಜಾನ್ ಹಬ್ಬದ ಪ್ರಯುಕ್ತ ಸಲ್ಮಾನ್ ಖಾನ್ ಹೊಸ ಚಿತ್ರವನ್ನು ಘೋಷಿಸಿದ್ದು, ಈ ಸಿನಿಮಾಗೆ ಸಿಕಂದರ್ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಎ.ಆರ್. ಮರುಗದಾಸ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, 2025ರ ಈದ್ಗೆ ಚಿತ್ರ ತೆರೆ ಕಾಣಲಿದೆ.