More

    ಅಪರಾಧ ತಡೆಗೆ ಪೊಲೀಸರಿಗೆ ಜನರ ಸಹಕಾರ ಬೇಕು

    ಕಡೂರು: ಸೈಬರ್ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹೆಚ್ಚು ಕಾರ್ಯೋನ್ಮುಖವಾಗಿದ್ದು, ಇದಕ್ಕೆ ನಾಗರಿಕರ ಸಹಕಾರ ಅಗತ್ಯ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದರು.

    ಶನಿವಾರ ಕಡೂರು-ಬೀರೂರು ವೃತ್ತಗಳ ಬೀಟ್ ನಾಗರಿಕ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲು ಇಲಾಖೆ ಹೆಚ್ಚು ತೊಡಗಿಸಿಕೊಳ್ಳುತ್ತಿದೆ. ಸೈಬರ್ ಪ್ರಕರಣಗಳಲ್ಲಿ ಅನ್ಯಾಯಕ್ಕೊಳಗಾದವರು ಠಾಣಾಧಿಕಾರಿಗಳಲ್ಲಿ ಮುಕ್ತವಾಗಿ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು. ಗ್ರಾಮೀಣ ಮಟ್ಟದ ಸಮಸ್ಯೆಗಳನ್ನೂ ಪೊಲೀಸರಿಗೆ ತಿಳಿಸಬಹುದು. ಇದರಿಂದ ತುರ್ತಾಗಿ ಆರೋಪಿಗಳ ಪತ್ತೆಗೆ ಸಾಧ್ಯವಾಗಲಿದೆ ಎಂದರು.
    ಸೈಬರ್ ಕ್ರೈಂ, ಅಕ್ರಮ ಮದ್ಯಮಾರಾಟ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಬೀಟ್ ಪೊಲೀಸ್ ವ್ಯವಸ್ಥೆ ಬಲಪಡಿಸಲಾಗುತ್ತಿದೆ. ಕಡೂರು ಮತ್ತು ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯ 51 ಬೀಟ್ ಮಾರ್ಗದಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.
    ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದಾಗಿ ಪಾದಚಾರಿಗಳಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಠಾಣಾಧಿಕಾರಿಗಳಿಗೆ ಎಸ್ಪಿ ಉಮಾಪ್ರಶಾಂತ್ ಸೂಚಿಸಿದರು.
    ತರೀಕೆರೆ ಡಿವೈಎಸ್ಪಿ ವಿ.ಎಸ್.ಹಾಲಮೂರ್ತಿ, ಕಡೂರು ವೃತ್ತ ನಿರೀಕ್ಷಕ ಶಿವಕುಮಾರ್, ಪಿಎಸ್‌ಐಗಳಾದ ಧನಂಜಯ್, ರಂಗನಾಥ್, ಕಿರಣ್‌ಕುಮಾರ್, ಪವಿತ್ರಾ, ಅಪ್ರಿ, ಗೀತಾ, ಲೀಲಾವತಿ, ನವೀನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts