ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕರೊನಾ ವಾರಿಯರ್ಸ್ ಜೀವಕ್ಕೆ ಮುಳುವಾಯ್ತು ಜೀವ ಉಳಿಸುವ ಆಂಬುಲೆನ್ಸ್!
ಸಿಟಿ ರಿಸರ್ವ್ ಪೊಲೀಸ್ ಪೇದೆ ಪ್ರಕಾಶ್ ಗುರುವಯ್ಯನವರ್(30) ಮೃತರು. ಸೆಕ್ಯೂರಿಟಿ ರೂಂನಲ್ಲಿಯೇ ಗಲ್ಲಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪೇದೆ ಆತ್ಮಹತ್ಯೆ ಬಗ್ಗೆ ಬೆಳಗಾವಿ ಪೊಲೀಸ್ ಕಮಿಷನರ್ ಲೋಕೇಶ್ಕುಮಾರ್ ಹೇಳಿಕೆ ನೀಡಿದ್ದು, ಮೃತ ಪ್ರಕಾಶ್ ಅವರಿಗೆ ಮನೋರೋಗದ ಸಮಸ್ಯೆ ಇತ್ತು. ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮೊದಲು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ವರ್ಷಗಳ ಹಿಂದೆ ಬೆಳಗಾವಿಗೆ ವರ್ಗವಾಗಿತ್ತು. ಕಳೆದ ಒಂದು ವಾರದ ಹಿಂದೆ ಡಿಸಿ ನಿವಾಸಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ನಿನ್ನೆ ರಾತ್ರಿ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಎಂದಿದ್ದಾರೆ.
ಇದನ್ನೂ ಓದಿ: ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ ಸಚಿವರ ಸಭೆಯಲ್ಲಿ ಚರ್ಚೆ
ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)