More

    ಪತ್ನಿ ಅಗಲಿಕೆ ನೋವು ತಾಳದೆ ಪ್ರಾಣ ಬಿಟ್ಟ ಕಾನ್ಸ್​ಟೇಬಲ್

    ಶಿವಮೊಗ್ಗ: ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಸಮವಸ್ತ್ರದಲ್ಲೇ ವಿನೋಬನಗರದ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸೋಮವಾರ ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದ ಜಯಪ್ಪ ಅವರು ಮನೆಗೆ ವಾಪಸ್ ತೆರಳಿದ್ದರು. ಮೂರು ದಿನಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಜಯಪ್ಪ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಸಾವು

    ಕರ್ತವ್ಯಕ್ಕೆ ಹಾಜರಾಗಿದ್ದ ಜಯಪ್ಪ ಹಗ್ಗ ಖರೀದಿಸಿ ವಿನೋಬನಗರ ಚೌಕಿ ಬಳಿಯ ಚೌಡಪ್ಪ ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ಮನೆ ಮೇಲುಗಡೆ ಇರುವ ಶೀಟ್‌ಗೆ ಹಾಕಲಾಗಿದ್ದ ಬೀಮ್​ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

    ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು; ವಾಹನ ಚಲಾಯಿಸುತ್ತಿದ್ದ ಚಿತ್ರನಟ ನಾಗಭೂಷಣ್ ಮದ್ಯಪಾನ ಮಾಡಿದ್ದರಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts