ಕೊಳ್ಳೇಗಾಲ : ಪಟ್ಟಣದ ಶ್ರೀ ಬಸವೇಶ್ವರ ನಗರದ ಜಿಪಂ ಮಾಜಿ ಸದಸ್ಯ ಹಾಗೂ ಬಿಎಸ್ಪಿ ರಾಜ್ಯ ಮಾಜಿ ಕಾರ್ಯದರ್ಶಿ ಕಮಲ್ ನಾಗರಾಜು ಬುಧವಾರ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ 100 ಕ್ಕೂ ಹೆಚ್ಚು ಜನರ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಕಮಲ್ ನಾಗರಾಜು, ನನ್ನನ್ನು ಪಕ್ಷ ಕಡೆಗಣಿಸುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿಯಾಗಿ ನಿವೃತ್ತ ತಹಸೀಲ್ದಾರ್ ಮಹದೇವಯ್ಯ ಅವರನ್ನು ಘೋಷಿಸಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ನೀಡಿಲ್ಲ. ಬಿಎಸ್ಪಿಯ ಈ ಧೋರಣೆಗೆ ಬೇಸತ್ತು ಈ ಚುನಾವಣೆಯಲ್ಲಿ ತಟಸ್ಥವಾಗಿರುವುದಾಗಿ ತಿಳಿಸಿದರು. ರೈತ ಮುಖಂಡರಾದ ಶಿವಮೂರ್ತಿ ನಾಯ್ಕ, ಗುರುಸ್ವಾಮಿ, ದಲಿತ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನಿಂಗಣ್ಣ ಉತ್ತಂಬಳ್ಳಿ, ದಲಿತ ಸಂರ್ಘಷ ಸಮಿತಿ ಅಧ್ಯಕ್ಷ ಶಿವಸ್ವಾಮಿ, ಮುಖಂಡರಾದ ಚಿನ್ನಸ್ವಾಮಿ, ಮಹೇಂದ್ರ, ರಾಮಣ್ಣ, ಸುರೇಶ್ ನಾಯ್ಕ, ಮೂರ್ತಿ ಇತರರು ಇದ್ದರು.