More

    ಬಿಜೆಪಿ ಸೋಲಿಸಲು ರಾಜಕೀಯ ಜಾಗೃತಿ ಅಭಿಯಾನ

    ರಾಯಚೂರು: ರೈತರಿಗೆ ದ್ರೋಹ ಎಸಗಿರುವ ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ರಾಜ್ಯಾದ್ಯಂತ ರಾಜಕೀಯ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಅಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಪ್ರಧಾನಿ ಮೋದಿ ರೈತರ ಸಾಲದ ಬದಲು ಕಾರ್ಪೋರೇಟ್ ಕಂಪನಿಗಳ 27.37 ಲಕ್ಷ ಕೋರಿ ರೂ. ಸಾಲವನ್ನು ರೈಟ್ ಆ್ ಮಾಡಿ ರೈತರಿಗೆ ದ್ರೋಹ ಬಗೆದಿದ್ದಾರೆ ಎಂದರು.
    ಚುನಾವಣೆ ಪ್ರಣಾಳಿಕೆಯಲ್ಲಿ ಡಾ.ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡುವುದಾಗಿ ಭರವಸೆ ನೀಡಿ, ಮತ್ತೊಂದೆಗೆ ಸುಪ್ರೀಂ ಕೋರ್ಟ್‌ಗೆ ವರದಿ ಜಾರಿಗೊಳಿಸಲು ಆಗುವುದಿಲ್ಲ ಎಂದು ಪ್ರಮಾಣಪತ್ರ ನೀಡಿದ್ದಾರೆ. ಅದಾನಿ, ಅಂಬಾನಿಗಳಿಗೆ ದೇಶದ ಒಕ್ಕಲುತನವನ್ನು ನಾಶ ಮಾಡಲು ನೀಡಲು ಮುಂದಾಗಿದೆ.
    ರಾಜ್ಯದಲ್ಲಿ ಇತಿಹಾಸ ಕಂಡರಿಯದ ಬರ ಆವರಿಸಿದ್ದರೂ ರಾಜ್ಯಕ್ಕೆ ನಷ್ಟ ಪರಿಹಾರ ನೀಡದೆ ಅನ್ಯಾಯ ಮಾಡಲಾಗಿದೆ. ಎನ್‌ಡಿಆರ್‌ಎ್ ನಿಯಮಗಳ ಪ್ರಕಾರ 18 ಸಾವಿರ ಕೋಟಿ ರೂ. ಅನುದಾನ ಕೇಳಿದರೆ, 3,453 ಕೋಟಿ ರೂ. ಮಾತ್ರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿ ವಂಚಿಸಲಾಗಿದೆ.
    ಸಂಘದ ಈ ಹಿಂದೆಯೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಿತ್ತು. ಸಂಘ ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲಿಸುವುದಿಲ್ಲ. ರೈತರು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ದ್ರೋಹ ಮಾಡಿದ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಲು ಜಾಗೃತಿ ನಡೆಸಲಾಗುತ್ತಿದೆ ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.
    ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಪದಾಕಾರಿಗಳಾದ ಬೂದಯ್ಯಸ್ವಾಮಿ, ಗೋಪಾಲ ಪಾಪೇಗೌಡ, ದೇವರಾಜ ನಾಯಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts