More

    ಮತದಾರರಿಗೆ ಅಭಿವೃದ್ಧಿ ಕಾರ್ಯಗಳ ಮನವರಿಕೆ: ಶಾಸಕ ಪುಟ್ಟರಾಜು ಪರ ಪುತ್ರ ಮತಯಾಚನೆ

    ಪಾಂಡವಪುರ: ಶಾಸಕ ಸಿ.ಎಸ್.ಪುಟ್ಟರಾಜು ಪರ ಅವರ ಪುತ್ರ ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು ಭಾನುವಾರ ಪಟ್ಟಣದಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
    ಪಟ್ಟಣದ 23 ವಾರ್ಡ್‌ಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ತಂದೆಯ ಪರವಾಗಿ ಪ್ರಚಾರ ನಡೆಸುತ್ತಿರುವ ಅವರು, ಭಾನುವಾರ 11ನೇ ವಾರ್ಡ್‌ನಲ್ಲಿ ಮನೆ ಮನೆಗೆ ತೆರಳಿ ತಂದೆಯ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸಿದರು.
    ‘ನಮ್ಮ ತಂದೆಯವರು ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ರಾಜ್ಯಕ್ಕೆ ಮದರಿ ಎನ್ನುವಂತೆ ಅಭಿವೃದ್ಧಿಪಡಿಸಿದ್ದಾರೆ. ಪಟ್ಟಣದ ರಸ್ತೆಗಳ ಅಭಿವೃದ್ಧಿ, ಉದ್ಯಾನ, ಶಾಲಾ ಕಾಲೇಜುಗಳ ಸ್ಥಾಪನೆ ಸೇರಿದಂತೆ ಒಳಚರಂಡಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಎದುರಾಗಿದ್ದ ಜಮೀನು ವಿವಾದವನ್ನು ಸರ್ಕಾರದ ಮಟ್ಟದಲ್ಲಿ ಬಗೆಹರಿಸಿದ್ದಾರೆ. ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹಲವೆಡೆ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಕ್ಷೇತ್ರದ ಮತದಾರರು ಅಭಿವೃದ್ಧಿ ಪರ ಚಿಂತನೆ ಹೊಂದಿರುವ ನಮ್ಮ ತಂದೆಗೆ ಮತ ನೀಡುವಂತೆ ಮನವಿ ಮಾಡಿದರು.
    ಪುರಸಭೆ ಸದಸ್ಯರಾದ ಶಿವಕುಮಾರ್, ಚಂದ್ರು, ಬಿ.ವೈ.ಬಾಬು, ಆರ್.ಸೋಮಶೇಖರ್, ಬೀರಶೆಟ್ಟಹಳ್ಳಿ ಶಿವಣ್ಣ, ಜೆಡಿಎಸ್ ಮುಖಂಡರಾದ ಟೌನ್ ಚಂದ್ರು, ಆರ‌್ಮುಗಂ, ರಾಜೇಶ್, ಮಹದೇವ, ಹಾರೋಹಳ್ಳಿ ಉಮೇಶ್, ಸುಂಕಾತೊಣ್ಣೂರು ಶ್ರೀಧರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts