ನವದೆಹಲಿ: ರಾಜಕಾರಣಿಗಳು ರಾಜಕಾರಣದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ದ್ವೇಷ ಭಾಷಣ ಕುರಿತು ಶಾಹೀನ್ ಅಬ್ದುಲ್ಲಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಜಸ್ಟಿಸ್ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮಾಜಿ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರೂ, ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಕೇಳಲು ಜನರು ದೂರದ ಪ್ರದೇಶಗಳಿಂದ ಬರತುತ್ತಿದ್ದರು ಎಂದು ಉಲ್ಲೇಖಿಸಿದರು.
ಇದನ್ನೂ ಓದಿ: ಟೆಕ್ ದೈತ್ಯ ಗೂಗಲ್ಗೆ ಬಿತ್ತು ಭಾರಿ ಮೊತ್ತದ ದಂಡ; CCI ಆದೇಶ ಎತ್ತಿ ಹಿಡಿದ NCLAT
ಕೆಲವರು ದ್ವೇಷ ಭಾಷಣಗಳನ್ನು ಮಾಡುವ ಮೂಲಕ ಸಮಾಜದ ಶಾಂತಿ-ಸೌಹಾರ್ದತೆ ಕದಡಲು ಪ್ರಯತ್ನಿಸುತ್ತಾರೆ. ಜನರು ಇಂಥವುಗಳಿಂದ ತಮ್ಮನ್ನು ತಾವು ನಿಗ್ರಹಿಸಬೇಕು ಎಂದು ನ್ಯಾಯಪೀಠ ಹೇಳಿದೆ.
ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇರಳದಲ್ಲಿ ನಿರ್ದಿಷ್ಟವಾದ ಸಮುದಾಯದ ವಿರುದ್ದ ಮಾಡಿದ ಭಾಷಣವನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿದರು. ಅರ್ಜಿದಾರರಾದ ಶಾಹೀನ್ ಅಬ್ದುಲ್ಲಾ ಅವರು ದ್ವೇಷ ಭಾಷಣಗಳ ಆಯ್ದ ಘಟನೆಗಳನ್ನು ನ್ಯಾಯಾಲಯಕ್ಕೆ ತೋರಿಸಿದ್ದಾರೆ ಎಂದು ವಾದವನ್ನು ಮಂಡಿಸಿದ್ದಾರೆ.