ರಾಯಚೂರು: ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ವಿದ್ಯುತ್ ಪ್ರಸರಣ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ಖಂಡಿಸಿ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಜೆಸ್ಕಾಂ ವಿಭಾಗೀಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.
ವಿದ್ಯುತ್ ಕಂಪನಿಗಳು ಸರ್ಕಾರದ ಅಧೀನದಲ್ಲಿದ್ದಾಗ ಮಾತ್ರ ರೈತರು, ಬಡವರಿಗೆ ನೆರವಾಗುವ ಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯ. ಕಂಪನಿ ಖಾಸಗೀಕರಣಗೊಂಡರೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಗಂಗಾ ಕಲ್ಯಾಣ ಮತ್ತಿತರ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಆರೋಪಿಸಿದರು.