ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ವೇದಿಕೆ

blank

ಉಡುಪಿ: ರ್ನಿದಿಷ್ಟ ಗುರಿ ಇದ್ದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಮತ್ತು ಸಾಂಸತಿಕ ಉತ್ಸವ ಪ್ರಜ್ಞಾ ಸ್ಟ್​ ಆಯೋಜಿಸಲಾಗಿದೆ. ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅದಮಾರು ಮಠ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

blank

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಲಾದ 2 ದಿನಗಳ ರಾಜ್ಯ ಮಟ್ಟದ ಅಂತರ್​ ಕಾಲೇಜು ಪ್ರಜ್ಞಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆಯಾಗಬೇಕು ಎಂಬ ಉದ್ದೇಶದಿಂದ ವಿಬುಧೇಶ ತೀರ್ಥ 6 ದಶಕಗಳ ಹಿಂದೆ ಕಾಲೇಜು ಪ್ರಾರಂಭಿಸಿದ್ದರು. ಅವರ ಕನಸು ನಸಾಗಿಸಲು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ.ಜಿ. ಎಸ್​. ಚಂದ್ರಶೇಖರ್​, ಪಿಐಎಂ ನಿರ್ದೇಶಕ ಡಾ. ಪಿ.ಎಸ್​. ಐತಾಳ್​, ಪ್ರಾಂಶುಪಾಲರಾದ ಡಾ. ರಾಮು ಎಲ್​., ಮುಖ್ಯ ಸಂಯೋಜಕ ಡಾ ಟಿ. ಎಸ್​. ರಮೇಶ್​, ಡಾ. ವಿನಯಕುಮಾರ್​, ಮಂಜುನಾಥ ಕರಬ, ಅನಂದ ರಾಯಮನೆ, ಪ್ರತಿಭಾ ಎಸ್​ ಭಟ್​, ಪ್ರತಿಭಾ ಆಚಾರ್ಯ, ಡಾ. ಸಂತೋಷ್​ ಕುಮಾರ್​, ಸುಮಲತಾ, ಡಾ. ಜಯಲಕ್ಷಿ$್ಮ ಮೊದಲಾದವರು ಉಪಸ್ಥಿತರಿದ್ದರು. ಉತ್ಸವದಲ್ಲಿ ಶೈಕ್ಷಣಿಕ ವಿಭಾಗದಲ್ಲಿ 37 ಮತ್ತು ಸಾಂಸತಿಕ ವಿಭಾಗದಲ್ಲಿ 7 ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share This Article

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…

ಆನ್​ಲೈನ್-ಆಫ್​ಲೈನ್ ಸಮತೋಲನ ಅಗತ್ಯ

‘ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾದ ಮಕ್ಕಳ ವಿಷಯದಲ್ಲಿ ಪಾಲಕರೂ ಹೆಚ್ಚು ಜವಾಬ್ದಾರಿ ವಹಿಸಬೇಕು’ ಎನ್ನುತ್ತಾರೆ ನಿಮ್ಹಾನ್ಸ್​ನ ಕ್ಲಿನಿಕಲ್…