ಉಡುಪಿ: ರ್ನಿದಿಷ್ಟ ಗುರಿ ಇದ್ದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಮತ್ತು ಸಾಂಸತಿಕ ಉತ್ಸವ ಪ್ರಜ್ಞಾ ಸ್ಟ್ ಆಯೋಜಿಸಲಾಗಿದೆ. ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅದಮಾರು ಮಠ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಹೇಳಿದರು.

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಲಾದ 2 ದಿನಗಳ ರಾಜ್ಯ ಮಟ್ಟದ ಅಂತರ್ ಕಾಲೇಜು ಪ್ರಜ್ಞಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆಯಾಗಬೇಕು ಎಂಬ ಉದ್ದೇಶದಿಂದ ವಿಬುಧೇಶ ತೀರ್ಥ 6 ದಶಕಗಳ ಹಿಂದೆ ಕಾಲೇಜು ಪ್ರಾರಂಭಿಸಿದ್ದರು. ಅವರ ಕನಸು ನಸಾಗಿಸಲು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಕಲ್ಪಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ.ಜಿ. ಎಸ್. ಚಂದ್ರಶೇಖರ್, ಪಿಐಎಂ ನಿರ್ದೇಶಕ ಡಾ. ಪಿ.ಎಸ್. ಐತಾಳ್, ಪ್ರಾಂಶುಪಾಲರಾದ ಡಾ. ರಾಮು ಎಲ್., ಮುಖ್ಯ ಸಂಯೋಜಕ ಡಾ ಟಿ. ಎಸ್. ರಮೇಶ್, ಡಾ. ವಿನಯಕುಮಾರ್, ಮಂಜುನಾಥ ಕರಬ, ಅನಂದ ರಾಯಮನೆ, ಪ್ರತಿಭಾ ಎಸ್ ಭಟ್, ಪ್ರತಿಭಾ ಆಚಾರ್ಯ, ಡಾ. ಸಂತೋಷ್ ಕುಮಾರ್, ಸುಮಲತಾ, ಡಾ. ಜಯಲಕ್ಷಿ$್ಮ ಮೊದಲಾದವರು ಉಪಸ್ಥಿತರಿದ್ದರು. ಉತ್ಸವದಲ್ಲಿ ಶೈಕ್ಷಣಿಕ ವಿಭಾಗದಲ್ಲಿ 37 ಮತ್ತು ಸಾಂಸತಿಕ ವಿಭಾಗದಲ್ಲಿ 7 ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.