ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ

ವಿಟ್ಲ: ಅನಂತಾಡಿ ಗ್ರಾಮದ ಬಾಬನಕಟ್ಟೆ ನಿವಾಸಿ ಬಲ್ಲು ಕೊರಗ ಎಂಬವರಿಗೆ ಸರ್ಕಾರ ಯೋಜನೆಯಾದ ಅಂಬೇಡ್ಕರ್ ಆವಾಝ್ ಯೋಜನೆಯ ಮೂಲಕ ಅನುದಾನ ಬಿಡುಗಡೆಗೊಂಡು, ಮನೆ ನಿರ್ಮಾಣದ ಕಾಮಗಾರಿ ಪೂರ್ಣಗೊಂಡು, ಗೃಹಪ್ರವೇಶಕ್ಕೆ ತಯಾರಾಗಿರುತ್ತದೆ. ಇದು ಸ್ಥಳೀಯ ಪಂಚಾಯಿತಿಯ ಶ್ಲಾಘನೀಯ ಕಾರ್ಯ. ಆದರೆ ಈ ಕಾಮಗಾರಿಯನ್ನು ಬಿಜೆಪಿ ತನ್ನ ಶಕ್ತಿ ಕೇಂದ್ರದ ಸಂಪೂರ್ಣ ಅನುದಾನವೆಂದು ಬಿಂಬಿಸಿ, ತಾಲೂಕು, ಜಿಲ್ಲಾಮಟ್ಟದ ಪಕ್ಷದ ನಾಯಕರನ್ನು ಕರೆಸಿ, ಉದ್ಘಾಟನೆಯ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದೆ. ಆ ಮೂಲಕ ಬಿಜೆಪಿ ತನ್ನ ಸಣ್ಣತನವನ್ನು ಪ್ರದರ್ಶಿಸುತ್ತಿದೆ. ಬಿಜೆಪಿಯ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿದೆ. ಆದುದರಿಂದ, ಸಾರ್ವಜನಿಕರ ಪರವಾಗಿ ಸಮಗ್ರ ತನಿಖೆಗೆ ಆಗ್ರಹಿಸುತ್ತೇವೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ. ವಿ.ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…