ವಿಟ್ಲ: ಅನಂತಾಡಿ ಗ್ರಾಮದ ಬಾಬನಕಟ್ಟೆ ನಿವಾಸಿ ಬಲ್ಲು ಕೊರಗ ಎಂಬವರಿಗೆ ಸರ್ಕಾರ ಯೋಜನೆಯಾದ ಅಂಬೇಡ್ಕರ್ ಆವಾಝ್ ಯೋಜನೆಯ ಮೂಲಕ ಅನುದಾನ ಬಿಡುಗಡೆಗೊಂಡು, ಮನೆ ನಿರ್ಮಾಣದ ಕಾಮಗಾರಿ ಪೂರ್ಣಗೊಂಡು, ಗೃಹಪ್ರವೇಶಕ್ಕೆ ತಯಾರಾಗಿರುತ್ತದೆ. ಇದು ಸ್ಥಳೀಯ ಪಂಚಾಯಿತಿಯ ಶ್ಲಾಘನೀಯ ಕಾರ್ಯ. ಆದರೆ ಈ ಕಾಮಗಾರಿಯನ್ನು ಬಿಜೆಪಿ ತನ್ನ ಶಕ್ತಿ ಕೇಂದ್ರದ ಸಂಪೂರ್ಣ ಅನುದಾನವೆಂದು ಬಿಂಬಿಸಿ, ತಾಲೂಕು, ಜಿಲ್ಲಾಮಟ್ಟದ ಪಕ್ಷದ ನಾಯಕರನ್ನು ಕರೆಸಿ, ಉದ್ಘಾಟನೆಯ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿದೆ. ಆ ಮೂಲಕ ಬಿಜೆಪಿ ತನ್ನ ಸಣ್ಣತನವನ್ನು ಪ್ರದರ್ಶಿಸುತ್ತಿದೆ. ಬಿಜೆಪಿಯ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿದೆ. ಆದುದರಿಂದ, ಸಾರ್ವಜನಿಕರ ಪರವಾಗಿ ಸಮಗ್ರ ತನಿಖೆಗೆ ಆಗ್ರಹಿಸುತ್ತೇವೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ. ವಿ.ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಗ್ರ ತನಿಖೆಗೆ ಕಾಂಗ್ರೆಸ್ ಆಗ್ರಹ
You Might Also Like
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…