More

    ಮಮತಾ ಬ್ಯಾನರ್ಜಿಯವರನ್ನು ರಾಜಕೀಯವಾಗಿ ಮುಗಿಸಿಬಿಡುತ್ತೇವೆ ಎಂದ ಪ್ರಹ್ಲಾದ್​ ಜೋಶಿ

    ಧಾರವಾಡ: ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಹೋಯ್ದಾಟಗಳು ನಿಮಗೆ ಗೊತ್ತೇ ಇವೆ. ಅಧಿಕಾರದಲ್ಲಿರುವ ಟಿಎಂಸಿ ಪಕ್ಷ ಮತ್ತು ವಿರೋಧ ಪಕ್ಷದಲ್ಲಿರುವ ಬಿಜೆಪಿಯ ನಡುವೆ ತೀವ್ರ ಕಿತ್ತಾಟ ನಡೆಯುತ್ತಲೇ ಇದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಲೇ ಇವೆ.

    ಇದನ್ನೂ ಓದಿ: ಡ್ರಗ್ಸ್​ ಪ್ರಕರಣದಲ್ಲಿ ಪ್ರಸಿದ್ಧ ಹಾಸ್ಯ ನಟಿ ದಂಪತಿ ಭಾಗಿ? ಎನ್​ಸಿಬಿ ಅಧಿಕಾರಿಗಳಿಂದ ದಂಪತಿಯ ವಿಚಾರಣೆ

    ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಹೇಳಿದ್ದಾರೆ. ಶನಿವಾರ ಧಾರವಾಡದಲ್ಲಿ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್​ ಪಕ್ಷವು ಸಿಪಿಐಎಂ ರೀತಿಯಲ್ಲಿಯೇ ಕೆಲಸ ಮಾಡುತ್ತಿದೆ. ಬೇರೆ ಪಕ್ಷದವರು ಬೆಳೆಯದಂತೆ ತಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 130ಕ್ಕೂ ಹೆಚ್ಚು ನಮ್ಮ ಕಾರ್ಯಕರ್ತರನ್ನು ಕೊಂದು ಹಾಕಿದ್ದಾರೆ.’ ಎಂದು ಹೇಳಿದರು.

    ಇದನ್ನೂ ಓದಿ: ಯೋಗಿ ಸರ್ಕಾರದಲ್ಲಿ ಲವ್​ ಜಿಹಾದ್​ ಬಗ್ಗೆ ಮಸೂದೆ ಸಿದ್ಧವಾಗುತ್ತಿಲ್ಲ; ಹಾಗಾದರೆ ಇಷ್ಟು ದಿನ ಹೇಳಿದ್ದು ಸುಳ್ಳಾ?

    ನಾವು ಟಿಎಂಸಿ ಪಕ್ಷವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ. ಮಮತಾ ಬ್ಯಾನರ್ಜಿಯವರನ್ನು ಈ ಚುನಾವಣೆಯಲ್ಲಿ ಮುಗಿಸುತ್ತೇವೆ. ರಾಜಕೀಯವಾಗಿ ಅವರಿಗೆ ಅಂತ್ಯ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

    ತಮಿಳುನಾಡಿಗೆ ಅಮಿತ್​ ಷಾ ಭೇಟಿ ಕೊಡುತ್ತಿದ್ದಂತೆಯೇ ಬಿಜೆಪಿ ಸೇರಲಾರಂಭಿಸಿದ ನಾಯಕರು

    ದೀದಿಗೆ ಕೈ ಕೊಡಲು ಸಿದ್ಧರಾಗಿದ್ದಾರಂತೆ ಅವರ ಬಲಗೈ ಬಂಟ; ಅಮಿತ್​ ಷಾ ಕಾಲಿಟ್ಟ ನೆಲದಲ್ಲಿ ಭಾರಿ ಸಂಚಲನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts