ಧಾರವಾಡ: ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಹೋಯ್ದಾಟಗಳು ನಿಮಗೆ ಗೊತ್ತೇ ಇವೆ. ಅಧಿಕಾರದಲ್ಲಿರುವ ಟಿಎಂಸಿ ಪಕ್ಷ ಮತ್ತು ವಿರೋಧ ಪಕ್ಷದಲ್ಲಿರುವ ಬಿಜೆಪಿಯ ನಡುವೆ ತೀವ್ರ ಕಿತ್ತಾಟ ನಡೆಯುತ್ತಲೇ ಇದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಲೇ ಇವೆ.
ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಪ್ರಸಿದ್ಧ ಹಾಸ್ಯ ನಟಿ ದಂಪತಿ ಭಾಗಿ? ಎನ್ಸಿಬಿ ಅಧಿಕಾರಿಗಳಿಂದ ದಂಪತಿಯ ವಿಚಾರಣೆ
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. ಶನಿವಾರ ಧಾರವಾಡದಲ್ಲಿ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್ ಪಕ್ಷವು ಸಿಪಿಐಎಂ ರೀತಿಯಲ್ಲಿಯೇ ಕೆಲಸ ಮಾಡುತ್ತಿದೆ. ಬೇರೆ ಪಕ್ಷದವರು ಬೆಳೆಯದಂತೆ ತಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 130ಕ್ಕೂ ಹೆಚ್ಚು ನಮ್ಮ ಕಾರ್ಯಕರ್ತರನ್ನು ಕೊಂದು ಹಾಕಿದ್ದಾರೆ.’ ಎಂದು ಹೇಳಿದರು.
ಇದನ್ನೂ ಓದಿ: ಯೋಗಿ ಸರ್ಕಾರದಲ್ಲಿ ಲವ್ ಜಿಹಾದ್ ಬಗ್ಗೆ ಮಸೂದೆ ಸಿದ್ಧವಾಗುತ್ತಿಲ್ಲ; ಹಾಗಾದರೆ ಇಷ್ಟು ದಿನ ಹೇಳಿದ್ದು ಸುಳ್ಳಾ?
ನಾವು ಟಿಎಂಸಿ ಪಕ್ಷವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ. ಮಮತಾ ಬ್ಯಾನರ್ಜಿಯವರನ್ನು ಈ ಚುನಾವಣೆಯಲ್ಲಿ ಮುಗಿಸುತ್ತೇವೆ. ರಾಜಕೀಯವಾಗಿ ಅವರಿಗೆ ಅಂತ್ಯ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡಿಗೆ ಅಮಿತ್ ಷಾ ಭೇಟಿ ಕೊಡುತ್ತಿದ್ದಂತೆಯೇ ಬಿಜೆಪಿ ಸೇರಲಾರಂಭಿಸಿದ ನಾಯಕರು
ದೀದಿಗೆ ಕೈ ಕೊಡಲು ಸಿದ್ಧರಾಗಿದ್ದಾರಂತೆ ಅವರ ಬಲಗೈ ಬಂಟ; ಅಮಿತ್ ಷಾ ಕಾಲಿಟ್ಟ ನೆಲದಲ್ಲಿ ಭಾರಿ ಸಂಚಲನ