ಭದ್ರಾವತಿ: ಪ್ರಮೋದ್ ಶೆಟ್ಟಿ ‘ಕಾಶಿ ಯಾತ್ರೆ’ ಎಂಬ ಚಿತ್ರದಲ್ಲಿ ಹೀರೋ ಆಗಿದ್ದು ಗೊತ್ತೇ ಇದೆ. ಈಗ ಅವರು ಸದ್ದಿಲ್ಲದೆ ಇನ್ನೊಂದು ಚಿತ್ರಕ್ಕೂ ನಾಯಕನಾಗಿದ್ದಾರೆ. ಅದೇ ‘ಲಾಫಿಂಗ್ ಬುದ್ಧ’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಭದ್ರಾವತಿಯಲ್ಲಿ ಆಗಿದ್ದು, ಚಿತ್ರೀಕರಣ ಪ್ರಾರಂಭವಾಗಿದೆ.
ಇದನ್ನೂ ಓದಿ: ಆಸ್ಕರ್ನಲ್ಲಿ ಮಲಾಲಾ ಯೂಸುಫ್ಝಾಯ್ ಪ್ರತ್ಯಕ್ಷರಾಗಿದ್ದು ಯಾಕೆ?
‘ಲಾಫಿಂಗ್ ಬುದ್ಧ’ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೊಲೀಸ್ ಪೇದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆತ ತನ್ನ ಲವಲವಿಕೆಯಿಂದ ಸುತ್ತಲಿನ ಜನರಲ್ಲಿ ಹೇಗೆ ಸ್ಫೂರ್ತಿ ತುಂಬುತ್ತಾನೆ ಎಂಬುದು ಈ ಚಿತ್ರದ ಕಥೆಯಂತೆ ಈ ಹಿಂದೆ, ರಿಷಭ್ ಶೆಟ್ಟಿ ನಿರ್ದೇಶನದ ‘ಹೀರೋ’ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ರಾಜ್, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.
ಪ್ರಮೋದ್ ಶೆಟ್ಟಿಗೆ ನಾಯಕಿಯಾಗಿ ತೇಜು ಬೆಳವಾಡಿ ಆಯ್ಕೆಯಾಗಿದ್ದರೆ. ಖ್ಯಾತ ನಟ ಪ್ರಕಾಶ್ ಬೆಳವಾಡಿ ಅವರ ಮಗಳಾದ ತೇಜು ಬೆಳವಾಡಿ, ಇದಕ್ಕೂ ಮುನ್ನ ‘ಗಂಟುಮೂಟೆ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು. ಈಗ ಅವರು ‘ಲಾಫಿಂಗ್ ಬುದ್ಧ’ ಚಿತ್ರದಲ್ಲಿ ಪ್ರಮೋದ್ ಶೆಟ್ಟಿಗೆ ನಾಯಕಿಯಾಗಿದ್ದಾರೆ.
ಇದನ್ನೂ ಓದಿ: ಆಸ್ಕರ್ನಲ್ಲಿ ಮಲಾಲಾ ಯೂಸುಫ್ಝಾಯ್ ಪ್ರತ್ಯಕ್ಷರಾಗಿದ್ದು ಯಾಕೆ?
ರಿಷಭ್ ಶೆಟ್ಟಿ, ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವಿಷ್ಣುವಿಜಯ್ ಸಂಗೀತ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಭದ್ರಾವತಿಯಲ್ಲೇ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.