ಸ್ಟಾರ್​ ಡೈರೆಕ್ಟರ್​ ಹುಟ್ಟುಹಬ್ಬದ ಸಂಭ್ರಮ ಹೀಗಿತ್ತು ನೋಡಿ …

blank

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​ ಡೈರೆಕ್ಟರ್​ ಎಂದು ಹೆಸರಾದವರು ಪ್ರಶಾಂತ್​ ನೀಲ್​. ಅವರು ಮಾಡಿದ್ದು ಉಗ್ರಂ ಮತ್ತು ಕೆಜಿಎಫ್​ ಎಂಬ ಎರಡೇ ಎರಡು ಚಿತ್ರಗಳಾದರೂ, ಆ ಎರಡೂ ಚಿತ್ರಗಳು ಸೂಪರ್​ ಹಿಟ್​ ಆಗಿ, ಅವರಿಗೆ ಅಂಥದ್ದೊಂದು ಬಿರುದನ್ನು ನೀಡಿದೆ. ಪ್ರಶಾಂತ್​ ಇಂದು ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಯಶ್​ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಅವರಿಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!

ಪ್ರಶಾಂತ್​ ನೀಲ್​ ಅವರ ಆಪ್ತವಲಯ ಮಧ್ಯರಾತ್ರಿಯೇ ಅವರನ್ನು ಭೇಟಿ, ಅವರಿಗೆ ಶುಭ ಹಾರೈಸಿದೆ. ಅಷ್ಟೇ ಅಲ್ಲ, ತಮ್ಮ ಹಿತೈಷಿಗಳು ತಮಗಾಗಿ ತಂದಿದ್ದ ಎರಡು ಕೇಕ್​ಗಳನ್ನು ಪ್ರಶಾಂತ್​ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಪ್ರಶಾಂತ್​ ಅವರ ಈ ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ರೀಮುರಳಿ, ತಿಲಕ್​, ನಿರ್ಮಾಪಕ ವಿಜಯಕುಮಾರ್​ ಕಿರಗಂದೂರು, ಛಾಯಾಗ್ರಾಹಕ ಭುವನ್​ ಗೌಡ ಸೇರಿದಂತೆ ಹಲವರು ಭಾಗವಹಿಸಿ ಅವರಿಗೆ ಶುಭ ಕೋರಿದ್ದಾರೆ. ಇನ್ನು ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು, ಸೋಷಿಯಲ್​ ಮೀಡಿಯಾ ಮೂಲಕ ಪ್ರಶಾಂತ್​ ಅವರಿಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಹುಟ್ಟುಹಬ್ಬ ಸಂಭ್ರಮದಲ್ಲಿರೋ ಪ್ರಿಯಾಮಣಿಯವರ ಹಾಟ್​ ಫೋಟೋ ಗ್ಯಾಲರಿ ನಿಮಗಾಗಿ

ಬರೀ ಕನ್ನಡದವರೇ ಅಷ್ಟೇ ಅಲ್ಲ, ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಗಳಾದ ಮೈತ್ರಿ ಮೂವಿ ಮೇಕರ್ಸ್​ ಮತ್ತು ಡಿವಿವಿ ಎಂಟರ್​ಟೈನ್​ಮೆಂಟ್​ ಸಹ ಪ್ರಶಾಂತ್​ ಅವರಿಗೆ ಶುಭ ಕೋರಿದ್ದಾರೆ. ಹಲವು ದಿನಗಳಿಂದ ಪ್ರಶಾಂತ್​ ಅವರು ತೆಲುಗು ಚಿತ್ರವೊಂದನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿಯೊಂದು ಕೇಳಿ ಬರುತ್ತಲೇ ಇತ್ತು. ಆದರೆ, ಪ್ರಶಾಂತ್​ ಈ ವಿಷಯವಾಗಿ ಎಲ್ಲೂ ಬಹಿರಂಗವಾಗಿ ಮಾತನಾಡಿರಲಿಲ್ಲ. ಇದೀಗ ತೆಲುಗು ನಿರ್ಮಾಣ ಸಂಸ್ಥೆಗಳು ಸಹ ಪ್ರಶಾಂತ್​ ಹುಟ್ಟುಹಬ್ಬಕ್ಕೆ ಶುಭ ಕೋರಿರುವುದರಿಂದ, ಮುಂದಿನ ದಿನಗಳಲ್ಲಿ ಪ್ರಶಾಂತ್​ ತೆಲುಗಿನಲ್ಲೂ ಚಿತ್ರ ನಿರ್ದೇಶಿಸುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

ಸದ್ಯಕ್ಕೆ ಪ್ರಶಾಂತ್​ ಅವರು ಕೆಜಿಎಫ್​ 2 ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರಕ್ಕೆ ಇನ್ನು 20 ದಿನಗಳ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಚಿತ್ರೀಕರಣ ಮಾಡುವುದಕ್ಕೆ ಅನುಮತಿ ಸಿಕ್ಕ ನಂತರ, ಚಿತ್ರೀಕರಣ ಶುರುವಾಗುವ ಸಾಧ್ಯತೆಗಳಿವೆ.

ಪವನ್​ ಒಡೆಯರ್​ ವಿರುದ್ಧ ಸುದೀಪ್​ ಅಭಿಮಾನಿಗಳ ಆಕ್ರೋಶ

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…