More

    ಕಾಂಗ್ರೆಸ್​ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ​

    ಮೈಸೂರು: ಬಿಜೆಪಿಯವರು ಸಾಲಮಾಡಿ ಹೋದರು ಅಂತ ನೀವು ಬೈಯುವುದು, ಕಾಂಗ್ರೆಸ್ ಲೂಟಿ ಮಾಡಿದರು ಅಂತ ಬಿಜೆಪಿಯವರು ಬೊಬ್ಬೆ ಹೊಡೆಯುವುದು ಬೇಡ ಎನ್ನುವ ಮೂಲಕ ನೂತನ ಕಾಂಗ್ರೆಸ್​ ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಸಲಹೆಯೊಂದನ್ನು ನೀಡಿದ್ದಾರೆ.

    ನಿನ್ನೆ (ಮೇ 20) ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ನಡಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರ ಸಾಕಷ್ಟು ಸಾಲ ಮಾಡಿ ಹೋಗಿದೆ ಎಂದು ಹೇಳಿದರು.

    ಇದನ್ನೂ ಓದಿ: ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!

    ಸಾಲದ ಅಂದಾಜೂ 2028ರಲ್ಲಿ ಸಿಗುತ್ತದೆ

    ಈ ಹೇಳಿಕೆಗೆ ಸಂಸದ ಪ್ರತಾಪ್​ ಸಿಂಹ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ರಾಜ್ಯದ ಒಟ್ಟಾರೆ ಸಾಲದ ಜೊತೆ 3 ವರ್ಷ 10 ತಿಂಗಳ ಬಿಜೆಪಿ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮಾಡಿರುವ ಸಾಲದ ಹೊರೆಯನ್ನೂ ಈಗಲೇ ಬಹಿರಂಗಪಡಿಸಿ, ಮುಂದೆ ನೀವು ಮಾಡಲಿರುವ ಸಾಲದ ಅಂದಾಜೂ 2028ರಲ್ಲಿ ಸಿಗುತ್ತದೆ ಎಂದಿದ್ದಾರೆ.

    ಸರಣಿ ಪ್ರಶ್ನೆಗಳು 

    ಇದರೊಂದಿಗೆ ಕಾಂಗ್ರೆಸ್​ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿರುವ ಕಾಂಗ್ರೆಸ್​ಗೆ ಪ್ರತಾಪ್​ ಸಿಂಹ ಸರಣಿ ಪ್ರಶ್ನೆಗಳನ್ನು ಸಹ ಕೇಳಿದ್ದಾರೆ. ರಾಜ್ಯದ ಈ ವರ್ಷದ ಬಜೆಟ್ ಗಾತ್ರವೆಷ್ಟು? ಈ ದಿನದವರೆಗಿನ ನಮ್ಮ ಒಟ್ಟು ಸಾಲ ಎಷ್ಟಿದೆ? ವಾರ್ಷಿಕ ಬಡ್ಡಿ ಮತ್ತು ಅಸಲು ಮರುಪಾವತಿಗೆ ಎಷ್ಟು ಬೇಕು? ಸರ್ಕಾರಿ ಉದ್ಯೋಗಿಗಳ ಸಂಬಳಕ್ಕೆ ಎಷ್ಟು ಸಾವಿರ ಕೋಟಿ ಬೇಕು? ಸರ್ಕಾರಿ ಯೋಜನೆಗಳ ಮುಂದುವರಿಕೆಗೆ ಎಷ್ಟು ಬೇಕು?

    ಇದನ್ನೂ ಓದಿ: ಅತ್ತೆ-ಮಾವ ಸುಪರ್ದಿಗೆ ಬಾಲಕ: ತಂದೆ ವಶಕ್ಕೆ ನೀಡಿದ್ದ ಕೌಟುಂಬಿಕ ಕೋರ್ಟ್, ಆದೇಶ ರದ್ದು ಮಾಡಿದ ಹೈಕೋರ್ಟ್

    2028ರಲ್ಲಿ ಮತ್ತೆ ಚುನಾವಣೆ ಬಂದಾಗ ರಾಜ್ಯದ ಅರ್ಥವ್ಯವಸ್ಥೆಯ ಆರೋಗ್ಯ ಹೇಗಿರುತ್ತೆ ಎಂಬುದರ ಅಂದಾಜು ಸಿಗಲಿ ಎಂಬ ಕಾರಣಕ್ಕೆ ಈ ಪ್ರಶ್ನೆಗಳನ್ನು ಕೇಳಿದ್ದೇನೆ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.

    ನಿರುದ್ಯೋಗಿಗಳಿಗೆ ಯುವನಿಧಿ: ಆದೇಶ ಮಾಡೇಬಿಟ್ಟ ಸರ್ಕಾರ; ಈ ಗ್ಯಾರಂಟಿಗೆ ಷರತ್ತುಗಳೇನು?

    ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

    ‘ಗೃಹಜ್ಯೋತಿ’ಯೂ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಖಚಿತ ಎಂದು ಸರ್ಕಾರಿ ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts