ವರುಣದಲ್ಲಿ ವಿ. ಸೋಮಣ್ಣ ಹೀನಾಯ ಸೋಲು: ಪ್ರತಾಪ್​ ಸಿಂಹ ಹೇಳಿಕೆಗಳೇ ಮುಳುವಾಯಿತು!

ಮೈಸೂರು: ರಾಜ್ಯದ ಹೈವೋಲ್ಟೇಜ್​ ಕ್ಷೇತ್ರ ವರುಣದಲ್ಲಿ ವಿ. ಸೋಮಣ್ಣ ಅವರ ಹೀನಾಯ ಸೋಲಿಗೆ ಸಂಸದ ಪ್ರತಾಪ್​ ಸಿಂಹ ನೀಡಿದ ಹೇಳಿಕೆಗಳೇ ಕಾರಣ ಎಂದು ಹೇಳಲಾಗುತ್ತಿದೆ. ತಮ್ಮ ವ್ಯಾಪ್ತಿ ಬಿಟ್ಟು ಪ್ರತಾಪ್​ ಸಿಂಹ ವರುಣಕ್ಕೆ ಸೀಮಿತವಾದರು. ಅಲ್ಲದೆ, ಬೇಕಾಬಿಟ್ಟಿ ನಾಲಿಗೆ ಹರಿಬಿಟ್ಟರು. ದಲಿತರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಪ್ರತಾಪ್ ಸಿಂಹ ಹೇಳಿಕೆಗಳು ಇಷ್ಟವಾಗಲಿಲ್ಲ. ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಒಮ್ಮೆಯೂ ಪ್ರತಾಪ್ ಸಿಂಹ ಭೇಟಿ ನೀಡಲಿಲ್ಲ. ಅಲ್ಲದೆ, ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ನಿರಂತರ ವಾಗ್ದಾಳಿ … Continue reading ವರುಣದಲ್ಲಿ ವಿ. ಸೋಮಣ್ಣ ಹೀನಾಯ ಸೋಲು: ಪ್ರತಾಪ್​ ಸಿಂಹ ಹೇಳಿಕೆಗಳೇ ಮುಳುವಾಯಿತು!