ಬೆಂಗಳೂರು: ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ಫಾಜಿಲ್ ಹತ್ಯೆಯ ಹಿಂದೆ ಇರುವ ಆರೋಪಿಗಳ ಜಾಡು ಹಿಡಿದಿರುವ ಪೊಲೀಸರು, ಅಪಾದಿತರರನ್ನು ಶೀಘ್ರದಲ್ಲಿಯೇ ಕಾನೂನಿನ ಕುಣಿಕೆಗೆ ತರಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಇಂದು ಮಾತನಾಡಿದ ಸಚಿವರು, ಪ್ರವೀಣ್ ಹತ್ಯೆ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದನ್ನು ಖಚಿತ ಪಡಿಸಿದ್ದಾರೆ. ಕೃತ್ಯಕೆ ಸಹಕರಿಸಿದವರ ಬಂಧನವಾಗಿದೆ. ಹತ್ಯೆ ಮಾಡಿದವರ ಬಂಧನ ಶೀಘ್ರದಲ್ಲಿಯೇ ನಡೆಯಲಿದೆ.
ಅಮಾನವೀಯ ಕೃತ್ಯ ನಡೆಸಿದವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಆದರೆ ಯಾರನ್ನೇ ವಿನಾಕಾರಣವಾಗಿ ಬಂಧಿಸಿಲ್ಲ ಎಂದರು. ಈ ಹಂತದಲ್ಲಿ ಹೆಚ್ಚೇನೂ ಹೇಳಲು ಇಚ್ಛಿಸುವುದಿಲ್ಲ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಮಸೂದ್ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಹಾಗೂ ಅಪರಾಧಿಗಳನ್ನು ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರೇಪ್ ಆರೋಪ ಮಾಡಿದ ನಾಲ್ಕು ಮಕ್ಕಳ ತಾಯಿಗೆ ಗ್ರಹಚಾರ ಬಿಡಿಸಿದ ಹೈಕೋರ್ಟ್- ನೀಡಿತು ಇಂಥದ್ದೊಂದು ಶಿಕ್ಷೆ
ಮನೆಗೆ ಬಾ ಎಂದು ಕರೆದಾಗ ಹೋಗಲೇಬೇಕು ಇಲ್ಲದಿದ್ರೆ… ಸ್ಟಾರ್ ನಟರ ಮುಖವಾಡ ಬಿಚ್ಚಿಟ್ಟ ಮಲ್ಲಿಕಾ ಶೆರಾವತ್