ಮಳೆಗಾಗಿ ಪ್ರಾರ್ಥಿಸಿ ಶಿವನ ದೇವಾಲಯದಲ್ಲಿ ಪರ್ಜನ್ಯ ಜಪ

blank

ಗುಂಡ್ಲುಪೇಟೆ: ಶಿವಪುರ ಸಮೀಪದ ಕಲ್ಲುಕಟ್ಟೆ ಜಲಾಶಯದಲ್ಲಿರುವ ಶಿವನ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ಅರಿಶಿಣ ಬೆಳೆಗಾರರ ಒಕ್ಕೂಟದ ನೂರಾರು ಸದಸ್ಯರು ಎಸ್.ಎಂ.ನಾಗಾರ್ಜುನಕುಮಾರ್ ನೇತೃತ್ವದಲ್ಲಿ ಪರ್ಜನ್ಯ ಜಪ ಹಾಗೂ ರುದ್ರಾಭಿಷೇಕ ಪೂಜೆ ನೆರವೇರಿದರು.

ಕುಂದಕೆರೆ ಸಂಪತ್ತು, ವೀರನಪುರ ನಾಗರಾಜು, ಸರ್ವೇಶ್, ಅಭಿಷೇಕ್, ಶಶಿ, ಶ್ಯಾನಾಡ್ರಹಳ್ಳಿ ಬಸವರಾಜು, ನಾಗೇಂದ್ರ ಸೇರಿದಂತೆ ನೂರಾರು ಸದಸ್ಯರು ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭೀಕರ ಬರಗಾಲ ಎದುರಾಗಿದ್ದರೂ ಕೆರೆಗಳಿಗೆ ನೀರು ತುಂಬಿಸಿಲ್ಲ. ಅಲ್ಲದೆ ಭೀಕರ ಬರಗಾಲ ತಾಂಡವವಾಡುತ್ತಿರುವ ಇಂತಹ ತುರ್ತು ಪರಿಸ್ಥಿತಿಯಲ್ಲಿಯೂ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದ್ದು ಇದು ಮುಂದಿನ ದಿನಗಳಲ್ಲಿ ಸಮಸ್ಯೆಗಳಿಗೆ ದಾರಿ ಮಾಡಿಕೊಡಲಿದೆ. ಆದ್ದರಿಂದ ತುರ್ತಾಗಿ ಕೆರೆಗಳಿಗೆ ನೀರು ತುಂಬಿಸಬೇಕು. ಜತೆಗೆ ಜಿಲ್ಲಾಧಿಕಾರಿಗಳ ಸಭೆಗೆ ರೈತರನ್ನೂ ಕರೆಯಬೇಕು ಎಂದು ಕೋರಿದರು.

ಸಂಘಟನೆ ಅಹವಾಲು ಆಲಿಸಿ ಮಾತನಾಡಿದ ತಹಸೀಲ್ದಾರ್ ಮಂಜುನಾಥ್, ಮನವಿಯನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು. ಏ17 ರಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಜಿಲ್ಲಾಧಿಕಾರಿಗಳು ಸಭೆ ನಡೆಸಲಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…