More

    ವ್ಯಾಜ್ಯ ಪೂರ್ವ 65,261 ಪ್ರಕರಣ ಇತ್ಯರ್ಥ

    ಚಿತ್ರದುರ್ಗ: ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 65,261 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.

    ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮನಗೂಳಿ ಎಂ. ಪ್ರೇಮಾವತಿ ಅವರ ನೇತೃತ್ವದಲ್ಲಿ ಅದಾಲತ್ ನಡೆಯಿತು. ವ್ಯಾಜ್ಯ ಪೂರ್ವ ಪೈಕಿ 66,214 ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 65,261 ಪ್ರಕರಣಗಳೊಂದಿಗೆ 13.31 ಕೋಟಿ ರೂ. ಹಣವನ್ನು ಇತ್ಯರ್ಥಗೊಳಿಸಲಾಯಿತು.
    ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 38,486 ಪ್ರಕರಣಗಳ ಪೈಕಿ 2,008 ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 1,228 ರಾಜಿ ಮೂಲಕ ಇತ್ಯರ್ಥಗೊಳಿಸಿ, 14.22 ಕೋಟಿ ರೂ. ಹಣವನ್ನು ಸಂಬಂಧಿಸಿದವರಿಗೆ ಕೊಡಿಸಲಾಯಿತು.

    ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ, ಮೋಟರ್ ವಾಹನ ಅಪಘಾತ ಪರಿಹಾರ, ಕಂದಾಯ, ಭೂಸ್ವಾಧೀನ, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಸೇರಿ ಹಲವು ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಹಲವು ಇತ್ಯರ್ಥಗೊಂಡವು.

    ಬ್ಯಾಂಕ್ ವಸೂಲಾತಿ, ಚೆಕ್ ಬೌನ್ಸ್, ಕಾರ್ಮಿಕರ ವಿವಾದ, ವಿದ್ಯುತ್ ಮತ್ತು ನೀರಿನ ಶುಲ್ಕ ಸೇರಿ ಇತರ ವ್ಯಾಜ್ಯ ಪೂರ್ವ ಪ್ರಕರಣಗಳು ಆಯ್ಕೆಯಾಗಿದ್ದವು. ನ್ಯಾಯಾಧೀಶರು, ವಕೀಲರು ಕಕ್ಷಿದಾರರ ಸಂಪರ್ಕದೊಂದಿಗೆ ರಾಜಿ ಸಂಧಾನದ ಮೂಲಕ ವಿವಿಧ ಪ್ರಕರಣ ಇತ್ಯರ್ಥಪಡಿಸಿದರು.
    ನ್ಯಾಯಾಧೀಶರಾದ ಎಸ್.ಎನ್.ಕಲ್ಕಣಿ, ಬಿ.ಕೆ.ಕೋಮಲಾ, ಕೆಂಪರಾಜು, ಬಿ.ಕೆ.ಗಿರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts