More

    ಹನುಮ ಜಯಂತಿ, ಶೋಭಯಾತ್ರೆಗೆ ಸಿದ್ಧತೆ

    ಬೇಲೂರು: ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ 11ನೇ ವಾರ್ಷಿಕೋತ್ಸವ ಹಾಗೂ ಹನುಮ ಜಯಂತಿ ಶೋಭಯಾತ್ರೆ ಡಿ.29 ಹಾಗೂ 30ರಂದು ಜರುಗಲಿದೆ.

    29ರಂದು ಸಂಜೆ ಶ್ರೀ ವೀರಾಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 30ರಂದು ಬೆಳಗ್ಗೆಯಿಂದಲೇ ಅಭಿಷೇಕ, ಹೋಮಗಳು ನಡೆಯಲಿವೆ. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಲಿದೆ. ಬಳಿಕ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಭಕ್ತರು ಪುಷ್ಪಮಾಲೆ ಅರ್ಪಿಸಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಉತ್ಸವ ಮೂರ್ತಿಯನ್ನು ಪುಷ್ಪ ಮಂಟಪದಲ್ಲಿ ಪ್ರತಿಷ್ಠಾಪಿಸಿ ಕಲಾ ತಂಡದೊಂದಿಗೆ ಮೆರವಣಿಗೆ ನಡೆಸಲಾಗುವುದು ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಬಿ.ಕೆ.ಮೋಹನಕುಮಾರ್ ತಿಳಿಸಿದ್ದಾರೆ.

    ಹನುಮ ಜಯಂತಿ ಹಾಗೂ ಶೋಭಯಾತ್ರೆಗೆ ಸಾವಿರಾರು ಭಕ್ತರು ಸೇರುವುದರಿಂದ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈಗಾಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲನೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts