ಶಾಲೆಯ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ…

School Meeting
blank

ಟ್ರಸ್ಟ್​ ಅಧ್ಯಕ್ಷ ಎಚ್​.ಆರ್​. ಶೆಣೈ ಆಶಯ

ಕಾಡಬೆಟ್ಟು ಸ್ಕೂಲ್​ ಶತಮಾನೋತ್ಸವದ ಪೂರ್ವಭಾವಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಶಾಲೆಗಳನ್ನು ಮುನ್ನಡೆಸುವುದು ಸುಲಭದ ಕಾರ್ಯವಲ್ಲ. ಹೀಗಾಗಿ ಸಮಾಜ, ದಾನಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಟಿ.ಎ. ಪೈ ಮಾಡರ್ನ್​ ಹಿರಿಯ ಪ್ರಾಥಮಿಕ ಶಾಲೆಯ ಟ್ರಸ್ಟ್​ ಅಧ್ಯಕ್ಷ ಎಚ್​.ಆರ್​. ಶೆಣೈ ವಿನಂತಿಸಿದರು.

ಉಡುಪಿಯ ಕಾಡುಬೆಟ್ಟುವಿನಲ್ಲಿರುವ ಟಿ.ಎ. ಪೈ ಮಾಡರ್ನ್​ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶಾಲಾ ಸಭಾಂಗಣದಲ್ಲಿ ಜೂನ್​ 15ರಂದು ಬೆಳಗ್ಗೆ ಆಯೋಜಿಸಿದ್ದ ಆಡಳಿತ ಮಂಡಳಿ, ಶಾಲಾ ಶಿಕ್ಷಕ-ಸಿಬ್ಬಂದಿ ವರ್ಗ, ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಹಿತೈಷಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

1927ರಲ್ಲಿ ಶಾಲೆ ಸ್ಥಾಪಿಸಲಾಗಿದ್ದು, 2027ರಲ್ಲಿ ಶತಕ ಪೂರೈಸಲಿದೆ. ಹೀಗಾಗಿ ಸಂಭ್ರಮದಿಂದ ಶತಮಾನೋತ್ಸವ ಆಚರಿಸಬೇಕಿದೆ. ತಮ್ಮೆಲ್ಲರ ಸಲಹೆ, ಸೂಚನೆ ಅಗತ್ಯ ಎಂದರು.

ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದೊಂದಿಗೆ ವಿವಿಧ ಸಮಿತಿ ರಚಿಸಲಾಯಿತು. 2026-27ರ ಶೈಕ್ಷಣಿಕ ವರ್ಷದಲ್ಲಿ ತಿಂಗಳವಾರು ವಿವಿಧ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಅಲ್ತಫ್​ ಎಂಬವರು ಶತಮಾನೋತ್ಸವಕ್ಕಾಗಿ 10 ಸಾವಿರ ರೂ. ಪ್ರಥಮ ದೇಣಿಗೆ ನೀಡಿದರು.

ಖಜಾಂಚಿ ರಮೇಶ ರಾವ್​, ಮುಖ್ಯ ಶಿಕ್ಷಕಿ ಸುಲೋಚನಾ ಉಪಸ್ಥಿತರಿದ್ದರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಾರಾಯಣ ಭಂಡಾರಿ ಸ್ವಾಗತಿಸಿದರು.

Share This Article

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…

ಪಾರ್ಲಿಮೆಂಟ್​ ಮೆನುವಿನಲ್ಲಿ ರಾಗಿ ಇಡ್ಲಿ ದರ್ಬಾರ್​! ಮಾಡೊದೇಗೆ? ಇಲ್ಲಿದೆ ಸಿಂಪಲ್ಸ್​ ಟಿಪ್ಸ್​​.. | Ragi Idli

Ragi Idli : ಇತ್ತೀಚಿನ ವೇಗದ ಆಧುನಿಕ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದೆ ಕಷ್ಟವಾಗಿದೆ. ಆದರಲ್ಲೂ ಪಟ್ಟಣ…