ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಕಳೆದ ಶನಿವಾರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯ ತಿಳಿಸಿದರು.
ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ಸ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಕ್ಕೆ ದೆಹಲಿಯ ಏಮ್ಸ್ ವೈದ್ಯರಿಗೆ ರಾಜನಾಥ್ ಸಿಂಗ್ ಅವರು ಧನ್ಯವಾದ ತಿಳಿಸಿದ್ದು, ಬೇಗನೇ ಗುಣಮುಖರಾಗುವಂತೆ ಆಶಿಸಿದ್ದದಾರೆ.
The President of India, Shri Ramnath Kovind has undergone a successful bypass surgery at AIIMS, Delhi.
I congratulate the team of Doctors for successful operation. Spoke to Director AIIMS to enquire about Rashtrapatiji’s health. Praying for his well-being and speedy recovery.
— Rajnath Singh (@rajnathsingh) March 30, 2021
ಇದನ್ನೂ ಓದಿ: ಅಂತೂ ಜಡ್ಜ್ ಮುಂದೆ ತನ್ನ ಹೇಳಿಕೆ ದಾಖಲಿಸಿದ ಸಿಡಿ ಲೇಡಿ!
ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಏಮ್ಸ್ಗೆ ದಾಖಲಾಗಿದ್ದರು.
ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಆಸ್ಪತ್ರೆಯ ಟಾಯ್ಲೆಟ್ನಲ್ಲಿ ಆಕ್ಸಿಜನ್ ಪೈಪ್ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!
‘ನಶಾಮುಕ್ತ ಭಾರತ’ ಅಭಿಯಾನ; ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ನಡೆಯಲಿದೆ?