More

    ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ಮರ್ಮು ಅವರಿಗೆ ಶಿವಸೇನೆ ಬೆಂಬಲ: ಉದ್ಧವ್​ ಠಾಕ್ರೆ ನೀಡಿದ ಕಾರಣ ಹೀಗಿದೆ

    ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಎನ್​ಡಿಎ ಪರವಾಗಿ ಶಿವಸೇನೆ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ. ಎನ್​ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರನ್ನು ಬೆಂಬಲಿಸುವುದಾಗಿ ಶಿವಸೇನೆ ಘೋಷಿಸಿದೆ.

    ಇದೇ ತಿಂಗಳ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇನ್ನು ಈ ಕುರಿತು ಮಂಗಳವಾರ ಸಂಜೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್​ ಠಾಕ್ರೆ, ಯಾವುದೇ ಒತ್ತಡವಿಲ್ಲದೇ ಮರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ತಮ್ಮ ಸಂಸದರೂ ಕೂಡ ಇದಕ್ಕೆ ಸಮ್ಮತಿಸಿದ್ದು, ಮರ್ಮು ಅವರ ಬೆಂಬಲಕ್ಕೆ ನಾವು ತೀರ್ಮಾನಿಸಿದ್ದೇವೆ. ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವಾಗ ಈ ನಿರ್ಧಾರಕ್ಕೆ ಬಂದಿದ್ದೇವೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ನಾವು ಎನ್​ಡಿಎಗೆ ಬೆಂಬಲ ನೀಡಬಾರದು, ಆದರೆ ನಾವು ಅಷ್ಟು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

    ಸಂಸತ್​ ಮುಂಗಾರು ಅಧಿವೇಶನ: ಇದೇ 17ರಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ಅರಬ್​ ರಾಷ್ಟ್ರದಿಂದ ಬಂದ ಹಡಗಿನ ಕಂಟೈನರ್​​ನಲ್ಲಿ ಸಿಕ್ತು ಕೋಟ್ಯಾಂತರ ಬೆಲೆಯ ಹೆರಾಯಿನ್​!: ಅಧಿಕಾರಿಗಳು ಪತ್ತೆ ಹಚ್ಚಿದ್ದು ಹೀಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts