ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಎನ್ಡಿಎ ಪರವಾಗಿ ಶಿವಸೇನೆ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ. ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರನ್ನು ಬೆಂಬಲಿಸುವುದಾಗಿ ಶಿವಸೇನೆ ಘೋಷಿಸಿದೆ.
ಇದೇ ತಿಂಗಳ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇನ್ನು ಈ ಕುರಿತು ಮಂಗಳವಾರ ಸಂಜೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ, ಯಾವುದೇ ಒತ್ತಡವಿಲ್ಲದೇ ಮರ್ಮು ಅವರನ್ನು ಬೆಂಬಲಿಸಲು ಶಿವಸೇನೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ತಮ್ಮ ಸಂಸದರೂ ಕೂಡ ಇದಕ್ಕೆ ಸಮ್ಮತಿಸಿದ್ದು, ಮರ್ಮು ಅವರ ಬೆಂಬಲಕ್ಕೆ ನಾವು ತೀರ್ಮಾನಿಸಿದ್ದೇವೆ. ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶವಿರುವಾಗ ಈ ನಿರ್ಧಾರಕ್ಕೆ ಬಂದಿದ್ದೇವೆ. ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ನಾವು ಎನ್ಡಿಎಗೆ ಬೆಂಬಲ ನೀಡಬಾರದು, ಆದರೆ ನಾವು ಅಷ್ಟು ಸಣ್ಣ ಮನಸ್ಥಿತಿ ಹೊಂದಿಲ್ಲ ಎಂದು ಹೇಳಿದ್ದಾರೆ. (ಏಜೆನ್ಸೀಸ್)