ಜೂ.16ರಂದು ಆಲಕೆರೆಯಲ್ಲಿ ರೈತರ ಶಾಲೆ ಉದ್ಘಾಟನೆ: ಸಂಘದ ಕಾರ್ಯದರ್ಶಿ ಸತ್ಯಮೂರ್ತಿ ಮಾಹಿತಿ

Press Conference on Inauguration of Raitha School Mandya
blank

ಮಂಡ್ಯ: ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ದೇಶದ ಮೊದಲ ರೈತರ ಶಾಲೆಯನ್ನು ಕೆರಗೋಡು ಹೋಬಳಿಯ ಆಲಕೆರೆ ಗ್ರಾಮದಲ್ಲಿ ಜೂ.16ರಂದು ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಸತ್ಯಮೂರ್ತಿ ತಿಳಿಸಿದರು.
ರೈತರ ಸಬಲೀಕರಣದ ದೃಷ್ಠಿಯಿಂದ ಹಾಗೂ ಸರಿಯಾದ ಮಾರ್ಗದರ್ಶನ ಮಾಹಿತಿ ನೀಡುವ ಸಲುವಾಗಿ ರೈತ ಶಾಲೆ ಆರಂಭಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆದಿಚುಂಚನಗಿರಿ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಶಾಸಕ ರವಿಕುಮಾರ್ ಗಣಿಗ ರೈತರ ಶಾಲೆ ಉದ್ಘಾಟಿಸಲಿದ್ದು, ಆಲಕೆರೆ ಗ್ರಾ.ಪಂ ಅಧ್ಯಕ್ಷ ಆರ್.ಶಶಿಧರ್ ಅಧ್ಯಕ್ಷತೆ ವಹಿಸುವರು. ಸಂಘದ ಖಜಾಂಚಿ ಪ್ರದೀಪ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ, ಕೃಷಿ ವಿವಿಯ ವಿಶೇಷಾಧಿಕಾರಿ ಕೆ.ಎಂ.ಹರಿಣಿಕುಮಾರ್, ಪಿಇಟಿ ಅಧ್ಯಕ್ಷ ವಿಜಯಾನಂದ, ಮನ್‌ಮುಲ್ ಅಧ್ಯಕ್ಷ ಶಿವಪ್ಪ, ನಿರ್ದೇಶಕರಾದ ರಘುನಂದನ್, ಬಿ.ಆರ್.ರಾಮಚಂದ್ರು, ಬಿಜೆಪಿ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಸಂಘದ ನಂದೀಶ್, ಜಗದೀಶ್, ಕಿರಣ್‌ಕುಮಾರ್, ಚೇತನ್‌ಕುಮಾರ್ ಇದ್ದರು.

Share This Article

ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು…ಈ ಒಂದು ಟ್ಯಾಬ್ಲೆಟ್ ಸದಾ ನಿಮ್ಮ ಬಳಿಯಿರಲಿ..! Heart Attack

Heart Attack : ಮೊದಲೆಲ್ಲ ಹೃದಯಾಘಾತವು ವಯಸ್ಕರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ, ಇಂದಿನ ಆಧುನಿಕ ಜೀವನದಲ್ಲಿ…

ವಿದುರ ನೀತಿ: ಇಂತಹ ಜನರಿಂದ ದೂರ ಇರಿ.. ಇಲ್ಲವಾದ್ರೆ ಅಪಾಯಕ್ಕೆ ಸಿಲುಕುತ್ತೀರಿ! | Vidura Niti

Vidura Niti: ಮಹಾಭಾರತದಲ್ಲಿ ಪ್ರಮುಖರಲ್ಲಿ ವಿದುರ ಕೂಡ ಒಬ್ಬರು. ಬರೀ ಕೌರವ ಮತ್ತು ಪಾಂಡವರಿಗೆ ಮಾತ್ರ…