blank

ಫೆ.22ರಂದು ನಗರದಲ್ಲಿ ಸನ್ಮಾನ ಸಮಾರಂಭ: ಹಿರಿಯ ವಿದ್ಯಾರ್ಥಿ ಬಗಳದ ಸದಸ್ಯ ಕೃಷ್ಣೇಗೌಡ ಹೇಳಿಕೆ

Press conference on the award ceremony Mandya

ಮಂಡ್ಯ: ಕೀಲಾರ ಗ್ರಾಮದ ಎಂ.ವಿ.ಎಂ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಫೆ.22ರಂದು ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಶಿಕ್ಷಕ ಹನಿಯಂಬಾಡಿ ರಾಜು ಅವರಿಗೆ ನಿವೃತ್ತಿಯ ಗೌರವ ಸಮರ್ಪಣೆ ಹಾಗೂ ಹಿರಿಯ ವಿದ್ಯಾರ್ಥಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಸದಸ್ಯ ಕೃಷ್ಣೇಗೌಡ ಹೇಳಿದರು.
ಅಂದು ಬೆಳಗ್ಗೆ 10ಗಂಟೆಗೆ ಆಯೋಜಿಸಿರುವ ಸಮಾರಂಭದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಟಿ.ಜವರೇಗೌಡ ವಹಿಸಲಿದ್ದು, ಹನಿಯಂಬಾಡಿ ರಾಜು ಮತ್ತು ದಂಪತಿಯನ್ನು ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ ಗೌರವಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಳಗದ ಲಂಕೇಶ್, ನಂದೀಶ್, ಚಂದ್ರಶೇಖರ್, ರಾಜಶೇಖರ್, ವೈರಮುಡಿ, ಗಿರೀಶ್ ಇದ್ದರು.

Share This Article

ಬೇಸಿಗೆ ಅಂತ ಅತಿ ಹೆಚ್ಚು ನೀರು ಕುಡಿಯುತ್ತೀರಾ? ಆರೋಗ್ಯಕ್ಕೆ ತುಂಬಾ ಡೇಂಜರ್​, ಕುಡಿಯುವ ರೀತಿ ಹೀಗಿರಲಿ… Summer

Summer : ಬೇಸಿಗೆ ವಾತಾವರಣದಲ್ಲಿ ಹೆಚ್ಚು ಚರ್ಚೆಯಾಗುವ ಪ್ರಮುಖ ಸಂಗತಿ ಯಾವುದೆಂದರೆ ಅದು ನೀರು. ಆದರೆ,…

ಈ 3 ರಾಶಿಯವರು ಹಣ ಉಳಿಸುವಲ್ಲಿ, ಗಳಿಸುವಲ್ಲಿ ಭಾರಿ ನಿಪುಣರು! ನಿಮ್ಮ ರಾಶಿ ಯಾವುದು? Zodiac Signs

Zodiac Signs : ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿ ಹಣವು ಪ್ರಮುಖ ಪಾತ್ರ ವಹಿಸುತ್ತದೆ. ಹಣದ ಬೇಡಿಕೆಯು…

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…