ಹಾಲು ಒಕ್ಕೂಟ ನೌಕರರಿಗೂ ಭ್ರಷ್ಟ ನಿಗ್ರಹ ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ, ಕೆಎಂಎಫ್ ಅಧಿಕಾರಿ ಅರ್ಜಿ ವಜಾ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರಕರಣ ರದ್ದು ಕೋರಿ ನಂದಿನಿ ಹಾಲು ಉತ್ಪನ್ನಗಳ ವ್ಯವಸ್ಥಾಪಕ ನಿರ್ದೇಶಕ ವಿ. ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರಿ ನೌಕರನಲ್ಲದ ತನಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯಿಸುವುದಿಲ್ಲ. ಆದ್ದರಿಂದ, ಎಸಿಬಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ … Continue reading ಹಾಲು ಒಕ್ಕೂಟ ನೌಕರರಿಗೂ ಭ್ರಷ್ಟ ನಿಗ್ರಹ ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ, ಕೆಎಂಎಫ್ ಅಧಿಕಾರಿ ಅರ್ಜಿ ವಜಾ