ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..

ಚಿಕ್ಕಬಳ್ಳಾಪುರ: ಪೂಜೆಯ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪೂಜಾರಿಯೊಬ್ಬರು ಮೃತಪಟ್ಟಿದ್ದು, ನೆರೆದಿದ್ದ ಭಕ್ತರೆಲ್ಲ ನೋಡನೋಡುತ್ತಿದ್ದಂತೆ ಅವರ ದೇಹ ನೂರಾರು ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಬೆಟ್ಟದ ಮೇಲಿನಿಂದ ಪೂಜಾರಿ ಕೆಳಕ್ಕೆ ಬೀಳುವ ದೃಶ್ಯ ಭಕ್ತರ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಿಂಗನಮಲ ಗ್ರಾಮದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಈ ಅವಘಡ ನಡೆದಿದೆ. ಶ್ರಾವಣ ಮಾಸದಲ್ಲಿ ನಡೆಯುವ ವಿಶೇಷ ಪೂಜೆಯ ಸಂದರ್ಭದಲ್ಲಿ ಈ ದುರಂತ ನಡೆದುಹೋಗಿದೆ. ಪೂಜೆಗೆ ತಯಾರಿಗೆ ಬಂದಿದ್ದ ಪೂಜಾರಿ, ಪೂಜೆ ಆರಂಭಿಸಿದ … Continue reading ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..